ಉಪಚುನಾವಣೆಯಲ್ಲಿ 2ಸ್ಥಾನ ಬಿಜೆಪಿ ಗೆಲ್ಲುತ್ತದೆ: ಕೋಟ ಶ್ರೀನಿವಾಸ್ ಪೂಜಾರಿ

Public TV
1 Min Read

– ಕಾಂಗ್ರೆಸ್ ದೇಶದಲ್ಲೇ ಅಸ್ಥಿತ್ವ ಕಳೆದುಕೊಳ್ಳುವ ಸ್ಥಿತಿ ತಲುಪಿದೆ

ಉಡುಪಿ: ಉಪಚುನಾವಣೆಯಲ್ಲಿ ಕಾಂಗ್ರೆಸ್ ದೇಶದಲ್ಲೇ ಅಸ್ಥಿತ್ವ ಕಳೆದುಕೊಳ್ಳುವ ಸ್ಥಿತಿ ತಲುಪಿದೆ. 2 ಸ್ಥಾನವನ್ನು ಬಿಜೆಪಿ ಗೆಲ್ಲುತ್ತದೆ ಎಂದು ಸಚಿವ ಕೋಟ ಶ್ರೀನಿವಾಸ್ ಪೂಜಾರಿ ವಿಶ್ವಾಸ ವ್ಯಕ್ತಪಡಿಸಿದರು.

ಉಡುಪಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಆಡಳಿತಾತ್ಮಕ ವಿಚಾರದಲ್ಲಿ ಲೋಪದೋಷ ಇದ್ದರೆ ಆರೋಪ ಮಾಡಿ. ಅನಗತ್ಯ ಗೊಂದಲ ಸೃಷ್ಟಿಸಬೇಡಿ. ಈ ಎರಡು ಸ್ಥಾನಗಳಲ್ಲಿ ಬಿಜೆಪಿ ಗೆಲ್ಲುವುದು ಖಚಿತವೆಂದು ಹೇಳಿದ್ದಾರೆ. ಇದನ್ನೂ ಓದಿ:   50 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಹೂಡಿದ ಶಿಲ್ಪಾ ಶೆಟ್ಟಿ

ಉಡುಪಿ ಜಿಲ್ಲೆ ಕಾಪು ಪೊಲೀಸರು ವಿಜಯ ದಶಮಿ ಹಬ್ಬದ ದಿನ ಕೇಸರಿ ಬಟ್ಟೆ ಧರಿಸಿದ್ದಕ್ಕೆ ಸಿದ್ದರಾಮಯ್ಯ ಆಕ್ಷೇಪ ಮಾಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಶ್ರೀನಿವಾಸ ಪೂಜಾರಿ, ಸಿದ್ದರಾಮಯ್ಯ ಹಿಂದುತ್ವ ವಿರೋಧಿ ಹೇಳಿಕೆ ನೀಡುವುದು ಹೊಸತಲ್ಲ. ಎಲ್ಲರೂ ಸಮಾನರು ಅನ್ನುವುದು ಬಿಟ್ಟು ಕೆಲವರು ಮಾತ್ರ ಸಮಾನರು ಅಂತಾರೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ:  6 ಬಾರಿ ಚಾಕುವಿನಿಂದ ಇರಿದು ಕೊಲೆ ಮಾಡಿದ ಪ್ರಿಯಕರ

ಸಿದ್ದರಾಮಯ್ಯ ಮತ್ತು ಅವರ ಪಕ್ಷ ಯಾವ ಸ್ಥಾನದಲ್ಲಿದೆ ಅರ್ಥಮಾಡಿಕೊಳ್ಳಲಿ. ಖಾಸಗಿಯಾಗಿ ಯಾವ ಉಡುಪು ಧರಿಸಬೇಕು ಅನ್ನುವ ಹಕ್ಕು ಪೊಲೀಸರಿಗೆ ಇದೆ. ಗೊಂದಲ ಮಾಡುವುದು ಉನ್ನತ ಸ್ಥಾನದಲ್ಲಿರುವ ಸಿದ್ದರಾಮಯ್ಯಗೆ ಶೋಭೆ ತರುವುದಿಲ್ಲ ಎಂದು ಹೇಳಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *