ರೆಸಾರ್ಟ್ ಗಲಾಟೆಯಿಂದ ಹತಾಶೆಗೊಂಡ ‘ಕೈ’ ನಾಯಕರು – ಮಾಧ್ಯಮಗಳ ವಿರುದ್ಧ ದಿನೇಶ್ ಗುಂಡೂರಾವ್ ಗರಂ

Public TV
2 Min Read

ಬೆಂಗಳೂರು: ಈಗಲ್ಟನ್ ರೆಸಾರ್ಟಿನಲ್ಲಿ ಶಾಸಕರು ಪರಸ್ಪರ ಬಡಿದಾಡಿಕೊಂಡ ಘಟನೆ ರಾಷ್ಟ್ರಮಟ್ಟದಲ್ಲಿ ಸುದ್ದಿಯಾದ ಬಳಿಕ ಕೈ ನಾಯಕರು ತಾಳ್ಮೆ ಕಳೆದುಕೊಂಡಿದ್ದಾರೆ. ರಾಷ್ಟ್ರ ಮಟ್ಟದಲ್ಲಿ ಮಾಧ್ಯಮಗಳಿಂದಾಗಿ ಪಕ್ಷದ ಮಾನ ಹೋಗಿದ್ದಕ್ಕೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮಾಧ್ಯಮಗಳಿಗೆ ಮಾನ ಇದ್ಯಾ ಎಂದು ಪ್ರಶ್ನಿಸಿದ್ದಾರೆ.

ರೆಸಾರ್ಟ್ ಗಲಾಟೆ ನಡೆದ ಬಳಿಕ ಆರಂಭದಲ್ಲಿ ನಾಯಕರು ಏನು ಆಗಿಲ್ಲ, ಎದೆ ನೋವಿನಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದೆಲ್ಲ ಸುಳ್ಳು ಹೇಳಿದ್ದರು. ಈ ಘಟನೆಯ ಬಗ್ಗೆ ಸತ್ಯ ಹೊರ ಬಂದ ಬಳಿಕ ಕಾಂಗ್ರೆಸ್ಸಿಗೆ ರಾಷ್ಟ್ರಮಟ್ಟದಲ್ಲಿ ಮುಜುಗರವಾಗಿತ್ತು. ರೆಸಾರ್ಟ್ ಗಲಾಟೆ ವಿಚಾರದಿಂದ ತಾಳ್ಮೆ ಕಳೆದುಕೊಂಡಿದ್ದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮಾಧ್ಯಮಗಳ ವಿರುದ್ಧವೇ ಕಿಡಿಕಾರಿದ್ದಾರೆ.

ಗುರುವಾರ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷದ ಉಸ್ತುವಾರಿ ವೇಣುಗೋಪಾಲ್ ಸೇರಿದಂತೆ ಜಿಲ್ಲಾವಾರು ಮುಖಂಡರ ಸಭೆ ನಡೆಯುತಿತ್ತು. ಈ ವೇಳೆ ಕಚೇರಿಗೆ ಆಗಮಿಸಿದ್ದ ಶಾಸಕ ಕಂಪ್ಲಿ ಗಣೇಶ್ ಬೆಂಬಲಿಗ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಶಾಸಕರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅಮಾನತು ಮಾಡಿರುವ ಆದೇಶವನ್ನು ಹಿಂಪಡೆಯುವಂತೆ ಆಗ್ರಹಿಸಿದ್ದರು.

ಕಾರ್ಯಕರ್ತರ ಪ್ರತಿಭಟನೆಯನ್ನು ಮಾಧ್ಯಮಗಳು ವರದಿ ಮಾಡಲು ಮುಂದಾಗುತ್ತಿದ್ದಾಗ ದಿನೇಶ್ ಗುಂಡೂರಾವ್, ನಿಮಗೆ ಮಾನ ಮರ್ಯಾದೆ ಇದ್ಯಾ? ಇದು ನಮ್ಮ ಕಚೇರಿ, ಇವರು ಪಕ್ಷದ ಒಳಗಿನ ವಿಚಾರ ಮಾತನಾಡಲು ಬಂದಿದ್ದಾರೆ. ಇದನ್ನೆಲ್ಲಾ ಶೂಟ್ ಮಾಡಲು ನಿಮಗೇ ಕಾಮನ್ ಸೆನ್ಸ್ ಇಲ್ವಾ ಎಂದು ಹೇಳಿ ನಿಂದಿಸಿದ್ದಾರೆ.

ಆಪರೇಷನ್ ಕಮಲದ ಹೆಸರಿನಲ್ಲಿ ಶಾಸಕರನ್ನ ರೆಸಾರ್ಟಿಗೆ ಕರೆದ್ಯೊದಿದ್ದ ಕಾಂಗ್ರೆಸ್ ಪಕ್ಷದ ನಾಯಕರು, ಶಾಸಕರು ಪರಸ್ಪರ ಬಡಿದಾಡಿಕೊಂಡ ಪ್ರಕರಣದಿಂದ ತೀವ್ರ ಮುಜುಗರ ಅನುಭವಿಸಿದ್ದಾರೆ. ಅಲ್ಲದೇ ಪ್ರಕರಣದ ಬಗ್ಗೆ ಆರಂಭದಿಂದಲೂ ಭಿನ್ನ ಹೇಳಿಕೆಗಳನ್ನ ನೀಡುವ ಮೂಲಕ ಮುಜುಗರಕ್ಕೆ ಒಳಗಾಗಿದ್ದರು. ಆ ಬಳಿಕ ಶಾಸಕ ಆನಂದ್ ಸಿಂಗ್, ಶಾಸಕ ಗಣೇಶ್ ವಿರುದ್ಧ ದೂರು ನೀಡುತ್ತಿದಂತೆ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಗಣೇಶ್‍ರನ್ನು ಅಮಾನತು ಮಾಡಿದ್ದರು. ಸದ್ಯ ಗಣೇಶ್ ಪೊಲೀಸ್ ಬಂಧನದ ಭಯದಿಂದ ನಾಪತ್ತೆಯಾಗಿದ್ದು, ಘಟನೆಯಲ್ಲಿ ಗಾಯಗೊಂಡಿರುವ ಶಾಸಕ ಆನಂದ್ ಸಿಂಗ್ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.

https://www.youtube.com/watch?v=lSR-9f0tyNQ

https://www.youtube.com/watch?v=9xgPiNXdmxU

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *