ಪ್ರಾಣಹಾನಿಯ ವಿಷಯದಲ್ಲಿ ರಾಜಕೀಯ ಮಾಡುವ ಇಚ್ಛೆಯಿಲ್ಲ: ಡಿಕೆಶಿ

Public TV
2 Min Read

ಬೆಂಗಳೂರು: ಸೂಕ್ತ ಕೆಲಸ ಸಿಗದೆ ವಿದ್ಯಾರ್ಥಿನಿಯೊಬ್ಬಳು ಉಡುಪಿಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದು, ಈ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿಷಾದ ವ್ಯಕ್ತಪಡಿಸಿ, ಪ್ರಾಣಹಾನಿಯ ವಿಷಯದಲ್ಲಿ ನನಗೆ ರಾಜಕೀಯ ಮಾಡುವ ಇಚ್ಛೆಯಿಲ್ಲ ಎಂದು ಹೇಳಿದ್ದಾರೆ.

ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, ಉಡುಪಿಯ 23 ವರ್ಷದ ಸಹನಾ ಆತ್ಮಹತ್ಯೆಯ ವಿಷಯ ತಿಳಿದು ದುಃಖವಾಗಿದೆ. ಎಂಬಿಎ ಪದವಿ ಪಡೆದರೂ ಸಹ ಸೂಕ್ತ ಕೆಲಸ ದೊರೆಯದೆ ಆಕೆ ಸಾವಿಗೆ ಶರಣಾಗಿದ್ದಾಳೆ. ನಿರುದ್ಯೋಗದಿಂದ ಪ್ರಾಣಕಳೆದುಕೊಂಡಿರುವ ಪ್ರಕರಣ ರಾಜ್ಯದಲ್ಲಿ ಇದೇ ಮೊದಲಲ್ಲ. ಪ್ರಾಣಹಾನಿಯ ವಿಷಯದಲ್ಲಿ ನನಗೆ ರಾಜಕೀಯ ಮಾಡುವ ಇಚ್ಛೆಯಿಲ್ಲ ಎಂದು ಬರೆದುಕೊಂಡಿದ್ದಾರೆ.

ಇದೆಲ್ಲವು ಆಗುತ್ತಿರುವುದು ಯಾಕೆ? ನಮ್ಮ ಯುವಸಮೂಹ ಯಾಕೆ ಹತಾಶೆಯನ್ನು ಎದುರಿಸಬೇಕಿದೆ? ನೋಬೆಲ್ ಪುರಸ್ಕೃತರನ್ನು ಒಳಗೊಂಡಂತೆ ಜಗತ್ತಿನ ಹಲವು ಪ್ರಸಿದ್ಧ ಅರ್ಥಶಾಸ್ತ್ರಜ್ಞರು ಭಾರತೀಯರು. ಉದ್ಯೋಗವನ್ನು ಸೃಷ್ಟಿ ಮಾಡಲು ನಾವು ಅವರ ಪರಿಣತಿಯನ್ನು ಉಪಯೋಗಿಸಿಕೊಳ್ಳಬಹುದಲ್ಲವೆ ಎಂದು ಪ್ರಶ್ನಿಸಿದ್ದಾರೆ.

ಭಾರತವು ಇದೀಗ 100 ನವೋದ್ಯಮಗಳನ್ನು ಹೊಂದಿದೆ. ಕರ್ನಾಟಕವು ಭಾರತದಾದ್ಯಂತ ಜನರಿಗೆ ಉದ್ಯೋಗ ಸೃಷ್ಟಿಸುತ್ತಿದೆ. ಆದರೂ ಯಾಕೆ ಅತಿಹೆಚ್ಚಿನ ನಿರುದ್ಯೋಗ ಪ್ರಮಾಣ ಹಾಗೂ ಆತ್ಮಹತ್ಯೆ ಪ್ರಕರಣಗಳನ್ನು ನಾವು ನೋಡುತ್ತಿದ್ದೇವೆ? ಮಾಧ್ಯಮಗಳು ಈ ಕುರಿತು ಯಾಕೆ ಚರ್ಚಿಸುತ್ತಿಲ್ಲ ಎಂದು ಡಿಕೆಶಿ ಮರು ಪ್ರಶ್ನೆ ಹಾಕಿದ್ದಾರೆ. ಇದನ್ನೂ ಓದಿ: ಉಮ್ರಾನ್ ಮಲಿಕ್ ಪಾಕಿಸ್ತಾನದಲ್ಲಿದ್ದರೆ ಅಂತಾರಾಷ್ಟ್ರೀಯ ಕ್ರಿಕೆಟ್ ಆಡುತ್ತಿದ್ದರು: ಕಮ್ರಾನ್ ಅಕ್ಮಲ್

ಏನಿದು ಪ್ರಕರಣ..?
ದಕ್ಷಿಣ ಕನ್ನಡ ಜಿಲ್ಲೆ ಉಪ್ಪಿನಂಗಡಿ ಮೂಲದ ಸಹನಾ (23) ವಿದ್ಯಾರ್ಹತೆಗೆ ಸೂಕ್ತ ಉದ್ಯೋಗ ಸಿಗದ ಹಿನ್ನೆಲೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ಒಂದೂವರೆ ವರ್ಷದ ಹಿಂದೆ ಎಂಬಿಎ ಪದವಿ ಮುಗಿಸಿದ್ದಳು. ಆಕೆಗೆ ಸೂಕ್ತ ಕೆಲಸ ಸಿಕ್ಕಿರಲಿಲ್ಲ. ಏಪ್ರಿಲ್ 30 ರಂದು ಶಿರ್ವ ಸಮೀಪದ ಕಟ್ಟಿಂಗೇರಿ ಗ್ರಾಮದ ಸಹೋದರಿ ಸೌಮ್ಯ ಅವರ ಮನೆಗೆ ಬಂದಿದ್ದ ಸಹನಾ ಅಲ್ಲೇ ರಾತ್ರಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಳು.

ಮೇ 1ರ ಬೆಳಗ್ಗೆ ಸಹನಾ ವಿಪರೀತ ವಾಂತಿ ಮಾಡಿದ್ದು, ಹೀಗಾಗಿ ಆಕೆಯನ್ನು ಉಡುಪಿ ನಗರದ ಮಿಷನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ನಂತರ ಮಣಿಪಾಲ ಆಸ್ಪತ್ರೆಗೆ ರವಾನಿಸಲಾಗಿತ್ತು. ಆಕೆಯ ಸ್ಥಿತಿ ಚಿಂತಾಜನಕ ಹಂತಕ್ಕೆ ತಲುಪಿದ್ದರಿಂದ ಮೇ 7ರಂದು ಉಡುಪಿಯ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಸಹನಾ ಅವರನ್ನು ಸ್ಥಳಾಂತರಿಸಲಾಯಿತು. ಮೇ 9 ರಂದು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದರು.

Share This Article
Leave a Comment

Leave a Reply

Your email address will not be published. Required fields are marked *