ಬೆಂಗಳೂರು: ಕೆಪಿಎಸ್ಸಿ (KPSC) ಅಕ್ರಮ ಆರೋಪ ಬೆನ್ನಲ್ಲೇ ಪರೀಕ್ಷಾ ನಿಯಂತ್ರಕ ಜ್ಞಾನೇಂದ್ರ ಕುಮಾರ್ ಗಂಗಾವರ್ ಎತ್ತಂಗಡಿ ಮಾಡಿದೆ. ಆ ಸ್ಥಾನಕ್ಕೆ ದಿಗ್ವಿಜಯ್ ಬೋಡ್ಕೆ ಅವರನ್ನು ನೇಮಿಸಲಾಗಿದೆ.
ಕೆಪಿಎಸ್ಸಿ ಪರೀಕ್ಷೆಗಳಲ್ಲಿ ಪದೇ ಪದೇ ಅಕ್ರಮ ಆರೋಪಗಳು ಕೇಳಿಬರುತ್ತಿದ್ದ ಹಿನ್ನೆಲೆ ಸರ್ಕಾರ ಮಹತ್ತರ ಸುಧಾರಣೆ ತಂದಿದೆ. ಕೇಂದ್ರ ಲೋಕಸೇವಾ ಆಯೋಗದ ಮಾದರಿಯಲ್ಲಿಯೇ ಇನ್ನು ಮುಂದೆ ಕರ್ನಾಟಕ ಲೋಕಸೇವಾ ಆಯೋಗದ ಮೂಲಕವೂ ಪ್ರತಿ ವರ್ಷ ಗೆಜೆಟೆಡ್ ಪ್ರೊಬೇಷನರಿ ಅಧಿಕಾರಿಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲು ಸರ್ಕಾರ ಸಿದ್ಧತೆ ನಡೆಸಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಬೀದಿ ವ್ಯಾಪಾರಕ್ಕೆ ಅನುಮತಿ ಇಲ್ಲ, ಹಳೇ ವಾಹನ ನಿಂತರೆ ಟೋಯಿಂಗ್: ಡಿಕೆಶಿ
ಈ ಬಗ್ಗೆ ವಿಧಾನಸಭೆಯಲ್ಲಿ ಸಚಿವ ಕೃಷ್ಣಬೈರೇಗೌಡ ಮಹತ್ವದ ಘೋಷಣೆ ಮಾಡಿದ್ರು. ಇಲಾಖೆಯಲ್ಲಿ ಸುಧಾರಣೆಗಳನ್ನು ತರುವ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ಈಗಾಗಲೇ ಸರ್ಕಾರದ ಮುಖ್ಯ ಕಾರ್ಯದರ್ಶಿ, ಹಣಕಾಸು ಇಲಾಖೆ ಹಾಗೂ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದ್ದಾರೆ.

