ಕೆಪಿಟಿಸಿಎಲ್ ಪರೀಕ್ಷೆ ಅಕ್ರಮ – ಹುಬ್ಬಳ್ಳಿಯಲ್ಲಿ ಕಿಂಗ್‌ಪಿನ್‌ ಅರೆಸ್ಟ್!

Public TV
1 Min Read

ಬೆಳಗಾವಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಕೆಪಿಟಿಸಿಎಲ್ ಕಿರಿಯ ಅಭಿಯಂತರ (ಜೆಇ)ಗೆ ನಡೆಸಲಾದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ನಡೆದ ಅಕ್ರಮಕ್ಕೆ ಸಂಬಂಧಿಸಿದಂತೆ ಬೆಳಗಾವಿ ಜಿಲ್ಲಾ ಪೊಲೀಸರು ಪ್ರಮುಖ ಆರೋಪಿಯನ್ನು ಬಂಧಿಸಿದ್ದು, ಈ ಸಂಖ್ಯೆ 13ಕ್ಕೇರಿದೆ.

ಜಿಲ್ಲೆಯ ಗೋಕಾಕ ತಾಲೂಕಿನ ಸಂಜೀವ ಲಕ್ಷ್ಮಣ ಬಂಡಾರಿ ಬಂಧಿತ ಕಿಂಗ್‌ಪಿನ್. ಬಂಧಿತ ಆರೋಪಿಯನ್ನು ಪೊಲೀಸರು ಗೋಕಾಕನ ಪ್ರಿನ್ಸಿಪಲ್ ಜೆಎಂಎಫ್‌ಸಿಗೆ ಹಾಜರುಪಡಿಸಿದ್ದರು. ಈ ವೇಳೆ ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿಯನ್ನು 7 ದಿನಗಳವರೆಗೆ ವಿಚಾರಣೆಗಾಗಿ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿದೆ. ಇದನ್ನೂ ಓದಿ: 2 ದಿನಗಳಿಂದ ದೇವರ ದರ್ಶನ ಇಲ್ಲ – ಮುರುಘಾ ಶ್ರೀಗಳ ಬಗ್ಗೆ ಮಠದ ಮಕ್ಕಳ ಮಾತು

ಕಳೆದ‌ ಆ.7 ರಂದು ಕೆಪಿಟಿಸಿಎಲ್‌ನ ಕಿರಿಯ ಅಭಿಯಂತರ (ಜೆಇ) ನೇಮಕಾತಿ ಪರೀಕ್ಷೆ ಸಮಯದಲ್ಲಿ ಗೋಕಾಕ ನಗರದ ಜೆಎಸ್‌ಎಸ್ ಪದವಿ ಪೂರ್ವ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಆರೋಪಿ ಸಿದ್ದಪ್ಪ ಕೆಂಪಣ್ಣ ಮದಿಹಳ್ಳಿ ಎಂಬಾತ ಸ್ಮಾರ್ಟ್ ವಾಚ್‌ನ ಕ್ಯಾಮೆರಾ ಮೂಲಕ ಪ್ರಶ್ನೆ ಪತ್ರಿಕೆಯನ್ನು ಫೋಟೋ ತೆಗೆದು ಟೆಲಿಗ್ರಾಂ ಮೂಲಕ ಪ್ರಮುಖ ಆರೋಪಿ ಸಂಜೀವ ಬಂಡಾರಿಗೆ ರವಾನಿಸಿದ್ದನು. ಈ ಅಕ್ರಮದ ಕುರಿತು ಗೋಕಾಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗುತ್ತಿದ್ದಂತೆ ಸಂಜೀವ ಬಂಡಾರಿ ತಲೆಮರೆಸಿಕೊಂಡಿದ್ದನು. ಅಲ್ಲದೇ ವಕೀಲರ ಮೂಲಕ ಎರಡು ಬಾರಿ ಜಾಮೀನಿಗಾಗಿ ಸಂಜು ಭಂಡಾರಿ ಅರ್ಜಿ ಸಲ್ಲಿಸಿದ್ದನು. ಆದರೆ ನ್ಯಾಯಾಲಯ ಆರೋಪಿ ಅರ್ಜಿಯನ್ನು ತಿರಸ್ಕರಿಸಿತು.

ಇತ್ತ ಸಂಜೀವ ಆರೋಪಿ ಭಂಡಾರಿ ಪರೀಕ್ಷಾರ್ಥಿಗಳಿಗೆ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಬ್ಲೂಟೂತ್‌ ಡಿವೈಸ್‌ಗಳನ್ನು ರವಾನಿಸುತ್ತಿದ್ದ. ಈಗ ಪೊಲೀಸರು ಬ್ಲೂಟೂತ್ ಡಿವೈಸ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿ ಸಂಜೀವ ಪೊಲೀಸ್ ಪೇದೆಯ ಮಗನಾಗಿದ್ದು, ಈ ಹಿಂದೆ ನಡೆದ ಪೊಲೀಸ್ ಪೇದೆ ಪರೀಕ್ಷೆ ಅಕ್ರಮದಲ್ಲೂ ಜೈಲಿಗೆ ಹೋಗಿ ಬಂದಿದ್ದಾನೆ. ಜಾಮೀನಿನ ಮೇಲೆ ಹೊರಗೆ ಬಂದು ತನ್ನ ಹಳೆಯ ಚಾಳಿ ಮುಂದುವರಿಸಿದ್ದಾನೆ ಎಂದು ತಿಳಿದು ಬಂದಿದೆ. ಈ ಸಂಬಂಧ ತನಿಖೆ ಮುಂದುವರಿದಿದೆ. ಇದನ್ನೂ ಓದಿ: ವಾಹನ ತಪಾಸಣೆ ವೇಳೆ ಪೊಲೀಸರಿಗೆ ಕುಡುಕನ ಅವಾಜ್

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *