ಕಳೆದ ಬಾರಿ ಗೆದ್ದ ರಹಸ್ಯ ಬಿಚ್ಚಿಟ್ಟ ನಾರಾಯಣ ಗೌಡ – ಯಾರಿಗೆ ಎಷ್ಟು ವೋಟ್ ಬಿದ್ದಿತ್ತು?

Public TV
1 Min Read

ಮಂಡ್ಯ: 2018ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸಹಕಾರದಿಂದ ನಾನು ಜಯಗಳಿಸಿದ್ದೆ ಎಂದು ಜೆಡಿಎಸ್ ಅನರ್ಹ ಶಾಸಕ ನಾರಾಯಣ ಗೌಡ ಹೇಳಿದ್ದಾರೆ.

ಉಪಚುನಾವಣೆ ಪ್ರಚಾರದ ಹಿನ್ನೆಲೆಯಲ್ಲಿ ಮಾತನಾಡಿದ ಅವರು, ಕಳೆದ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್ ಹೊಂದಾಣಿಕೆಯಾಗಿತ್ತು. ನಮ್ಮ ಕ್ಷೇತ್ರಕ್ಕೆ ಯಡಿಯೂರಪ್ಪ ಬಂದು ಪ್ರಚಾರವನ್ನೇ ಮಾಡಿರಲಿಲ್ಲ. ಆದರೂ ನಾನು ಗೆಲ್ಲುವುದಕ್ಕೆ ಬಿಜೆಪಿಯವರ ಸಹಕಾರವೂ ಕಾರಣ ಎಂದು ತಿಳಿಸಿದರು. ಇದನ್ನೂ ಓದಿ: ಹ್ಯಾಟ್ರಿಕ್ ಗೆಲುವಿಗಾಗಿ ದೇವಿ ಮುಂದೆ ಬಿ ಫಾರಂ ಇಟ್ಟು ಪೂಜೆ ಸಲ್ಲಿಸಿದ ನಾರಾಯಣಗೌಡ

ಬಿಜೆಪಿ ಮತ್ತು ನಮ್ಮ ನಡುವೆ ನೇರವಾಗಿ ಹೊಂದಾಣಿಕೆ ಆಗಿರಲಿಲ್ಲ. ಆದರೆ ಪರೋಕ್ಷವಾಗಿ ಆಗಿತ್ತು. ಹಲವು ಕ್ಷೇತ್ರದಲ್ಲಿ ಬಿಜೆಪಿ ಸರಿಯಾಗಿ ಪ್ರಚಾರವೇ ಮಾಡಿರಲಿಲ್ಲ. ನನಗಂತೂ ತುಂಬಾ ಜನ ಬಿಜೆಪಿ ಮುಖಂಡರು ಆಶೀರ್ವಾದ ಮಾಡಿದ್ದರು. ನಾನು ಬಿಜೆಪಿ ಅಭ್ಯರ್ಥಿ ಮನೆಗೆ ಹೋಗಿ ಅವರ ತಂದೆ ಆಶೀರ್ವಾದ ಪಡೆದಿದ್ದೆ ಎಂದು ಅವರು ಈ ವೇಳೆ ವಿವರಿಸಿದರು.

2018 ಚುನಾವಣೆಯಲ್ಲಿ ನಾರಾಯಣ ಗೌಡ 16,935 ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಕೆಬಿ ಚಂದ್ರಶೇಖರ್ ವಿರುದ್ಧ ಜಯಗಳಿಸಿದ್ದರು. ನಾರಾಯಣ ಗೌಡ 87,562 ಮತಗಳನ್ನು ಪಡೆದರೆ ಕೆಬಿ ಚಂದ್ರಶೇಖರ್ 70,627 ಮತಗಳನ್ನು ಪಡೆದಿದ್ದರು. ಬಿಜೆಪಿಯಿಂದ ಸ್ಪರ್ಧಿಸಿದ್ದ ಬಿಸಿ ಮಂಜು 9,819 ಮತಗಳನ್ನು ಪಡೆದಿದ್ದರು.

Share This Article
Leave a Comment

Leave a Reply

Your email address will not be published. Required fields are marked *