ಒಕ್ಕಲಿಗ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆ – ಪ್ರೊ. ಭಗವಾನ್ ಮನೆಗೆ ಮುತ್ತಿಗೆಗೆ ಯತ್ನ

Public TV
1 Min Read

ಮೈಸೂರು: ನಗರದಲ್ಲಿ ಶುಕ್ರವಾರ (ಅ.13) ನಡೆದ ಮಹಿಷ ಉತ್ಸವದ ವೇಳೆ ಪ್ರಗತಿಪರ ಚಿಂತಕ ಪ್ರೊ.ಕೆ.ಎಸ್ ಭಗವಾನ್ (KS Bhagawan) ಒಕ್ಕಲಿಗ ಸಮುದಾಯದ (Okkaliga Community) ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿಂದು ಪ್ರೊ.ಭಗವಾನ್ ನಿವಾಸಕ್ಕೆ ಮೈಸೂರು ಚಾಮರಾಜ ಕ್ಷೇತ್ರದ ಒಕ್ಕಲಿಗರ ಸಂಘದಿಂದ ಮುತ್ತಿಗೆಗೆ ಯತ್ನಿಸಲಾಯಿತು.

ಅವಹೇಳನಕಾರಿ ಹೇಳಿಕೆಯಿಂದ ಆಕ್ರೋಶಗೊಂಡಿದ್ದ ಪ್ರತಿಭಟನಾಕಾರರು ಮನೆಗೆ ಮುತ್ತಿಗೆಹಾಕಲು ಯತ್ನಿಸಿದರು. ಬ್ಯಾರಿಕೇಡ್ ಕಿತ್ತು ಭಗವಾನ್ ಮನೆಗೆ ನುಗ್ಗಲು ಯತ್ನಿಸಿದರು. ಈ ವೇಳೆ ಪೊಲೀಸರು (Mysuru City Police) ಹಾಗೂ ಪ್ರತಿಭಟನಾಕಾರರ ನಡುವೆ ವಾಗ್ವಾದ ಹಾಗೂ ತಳ್ಳಾಟ ನೂಕಾಟವೂ ನಡೆದಿದ್ದು, ಕೆಲವರು ಕೈ ಮತ್ತು ಹಣೆಯ ಭಾಗಕ್ಕೆ ಗಾಯವನ್ನೂ ಮಾಡಿಕೊಂಡರು. ಇದನ್ನೂ ಓದಿ: World Cup 2023: ಇಂಡೋ-ಪಾಕ್‌ ಕದನ ಯಾವಾಗಲೂ ರಣಕಣ ಏಕೆ? – ನೆನಪಿದೆಯಾ ಆ ಕರಾಳ ದಿನಗಳು?

ಶುಕ್ರವಾರ ಮಹಿಷ ಉತ್ಸವ ಕಾರ್ಯಕ್ರಮದಲ್ಲಿ ಪ್ರೊ.ಭಗವಾನ್ ಒಕ್ಕಲಿಗರು ಸಂಸ್ಕೃತಿ ಹೀನರೆಂದು ಅವಹೇಳನಕಾರಿ ಹೇಳಿಕೆ ನೀಡಿದ್ದರು. ಇದರಿಂದ ರೊಚ್ಚಿಗೆದ್ದ ಒಕ್ಕಲಿಗ ಸಮುದಾಯದ ಮುಖಂಡರು ಭಗವಾನ್ ಮನೆಗೆ ಮುತ್ತಿಗೆಹಾಕಲು ಯತ್ನಿಸಿದರು.

ಒಕ್ಕಲಿಗ ಜನಾಂಗಕ್ಕೆ ಸಂಸ್ಕೃತಿ ಕಲಿಸಿ, ಭಗವಾನ್ ತಾವೂ ಒಕ್ಕಲಿಗ ಸಮುದಾಯದವರು ಎಂದು ಹೇಳಿಕೊಳ್ಳುತ್ತಾರೆ. ಮತ್ತೊಂದುಕಡೆ ಸಮುದಾಯವನ್ನೇ ನಿಂದಿಸುತ್ತಾರೆ. ಅವರು ಒಕ್ಕಲಿಗ ಸಮುದಾಯದವರು ಎಂಬುದೇ ಅನುಮಾನವಿದೆ. ಅವರನ್ನು ಈಗಲೆ ಕರೆಸಿ, ಇಲ್ಲವೇ ದೂರು ನೀಡುತ್ತೇವೆ. ಕೂಡಲೇ ಎಫ್‌ಐಆರ್ ಮಾಡಿಸಿ ಎಂದು ಪಟ್ಟು ಹಿಡಿದಿದ್ದಾರೆ. ಇದನ್ನೂ ಓದಿ: ಪ್ರಿಯಕರನಿಂದ ವಂಚನೆ, ಕೊಲೆ ಬೆದರಿಕೆ ಆರೋಪ- ವಿಷ ಸೇವಿಸಿ ವಿದ್ಯಾರ್ಥಿನಿ ಆತ್ಮಹತ್ಯೆ

ಸದ್ಯ ಭಗವಾನ್ ಮನೆಗೆ ಪೊಲೀಸ್ ಸರ್ಪಗಾವಲು ಹಾಕಲಾಗಿದೆ. ಸ್ಥಳದಲ್ಲಿ ರಾಜ್ಯ ಮೀಸಲು ಪಡೆ 100ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿಂದು ಹಲವೆಡೆ ವಿದ್ಯುತ್ ವ್ಯತ್ಯಯ; Ind Vs Pak ಮ್ಯಾಚ್ ನೋಡುವ ಫ್ಯಾನ್ಸ್‌ಗೆ ನಿರಾಸೆ ಸಾಧ್ಯತೆ

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್