ನಿಂಬೆಹಣ್ಣಿನೊಂದಿಗೆ ಮಾಂಸದೂಟದಲ್ಲಿ ರೇವಣ್ಣರನ್ನು ನುಂಗುತ್ತೇನೆ: ಈಶ್ವರಪ್ಪ

Public TV
1 Min Read

ಕಲಬುರಗಿ: ಬಿಜೆಪಿ ನಾಯಕ ಈಶ್ವರಪ್ಪ ಅವರಿಗೂ ನಿಂಬೆಹಣ್ಣು ನೀಡುತ್ತೇನೆ ಎಂದು ಹೇಳಿಕೆ ನೀಡಿದ್ದ ಲೋಕೋಪಯೋಗಿ ಸಚಿವ ರೇವಣ್ಣ ಅವರಿಗೆ ಈಶ್ವರಪ್ಪ ಅವರು ಖಡಕ್ ತಿರುಗೇಟು ನೀಡಿದ್ದಾರೆ.

ನಗರದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ ಮಾತನಾಡಿದ ಅವರು, ನಮ್ಮ ಮನೆಯಲ್ಲಿ ಮಾಂಸದೂಟ ಚೆನ್ನಾಗಿ ಮಾತನಾಡುತ್ತಾರೆ. ಅದಕ್ಕೆ ನಿಂಬೆಹಣ್ಣನ್ನು ಹಿಂಡಿಕೊಂಡು ಅವರನ್ನು ಅದರೊಂದಿಗೆ ನುಂಗುತ್ತೇನೆ. ರೇವಣ್ಣ ಅವರಿಗೆ ಬಿಜೆಪಿ ಕಾರ್ಯಕರ್ತರ ಬಗ್ಗೆ ಗೊತ್ತಿಲ್ಲ ಅದಕ್ಕೆ ಈ ರೀತಿ ಮಾತನಾಡುತ್ತಿದ್ದಾರೆ ಎಂದರು.

ರೇವಣ್ಣ ಅವರಿಗೆ ಜಾತಿ ಹಾಗೂ ಕುಟುಂಬ ರಾಜಕಾರಣ ಮಾಡುವುದು ಮಾತ್ರ ಗೊತ್ತು. ಅವರ ಜಾತಿ ಮತ್ತು ಕುಟುಂಬವನ್ನು ಈ ಬಾರಿಯ ಚುನಾವಣೆಯಲ್ಲಿ ನಿಂಬೆಹಣ್ಣಿನೊಂದಿಗೆ ಹಿಂಡಿಕೊಂಡು ಕುಡಿಯುತ್ತೇನೆ. ಅವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. ಚುನಾವಣೆಯಲ್ಲಿ ಮೋದಿ ಅಧಿಕಾರಕ್ಕೆ ಬಂದರೆ ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೇನೆ ಎಂದು ಹೇಳಿದ್ದಾರೆ. ಇದು ಕೂಡ ಅವರು ಹೇಳಿದ ಸುಳ್ಳುಗಳಲ್ಲಿ ಒಂದಾಗಲಿದೆ ಅಷ್ಟೇ ಎಂದು ಭವಿಷ್ಯ ನುಡಿದರು.

ರೇವಣ್ಣ ಹೇಳಿದ್ದೇನು?
ಕೆಲ ದಿನಗಳ ಹಿಂದೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದ ರೇವಣ್ಣ ಅವರು, ನಾನು ಯಾಕೆ ನಿಂಬೆಹಣ್ಣನ್ನು ಹಿಡಿದುಕೊಂಡಿರುತ್ತೇನೆ ಎನ್ನುವ ಉತ್ತರಿಸಿ, ನಮ್ಮ ಕುಲದೇವರು ಈಶ್ವರ. ಈಶ್ವರ ಫೋಟೋ ಜೊತೆ ನಿಂಬೆಹಣ್ಣು ಇಟ್ಟುಕೊಂಡಿರುತ್ತೇನೆ. ಸಮಾವೇಶದಲ್ಲಿ ಯಾರೋ ಕೊಟ್ಟರೂ ಅಂತಾ 5-6 ನಿಂಬೆಹಣ್ಣು ಇಟ್ಟುಕೊಂಡಿದ್ದೆ ಅಷ್ಟೇ ಎಂದಿದ್ದರು. ಇದೇ ವೇಳೆ ಈಶ್ವರಪ್ಪ ಅವರಿಗೆ ನಿಂಬೆಹಣ್ಣು ಕೊಡಲ್ವಾ ಎಂಬ ಪ್ರಶ್ನೆಗೆ ಉತ್ತರಿಸಿದ, ಈಶ್ವರಪ್ಪನನ್ನು ಯಾಕ್ರಪ್ಪ ಇಷ್ಟೋತ್ತಲ್ಲಿ ನೆನಪಿಸಿಕೊಳ್ತೀರಾ? ಯಾರಾದರೂ ಒಳ್ಳೆಯವರನ್ನು ನೆನಪಿಸಿಕೊಳ್ಳಿ. ಆ ಈಶ್ವರಪ್ಪನನ್ನು ಯಾಕ್ ನೆನಪಿಸಿಕೊಳ್ತೀರಾ. ಈಶ್ವರಪ್ಪನ ಬಗ್ಗೆ ಮಾತನಾಡಿದ್ರೆ ನಾನು ಪೊಳ್ಳೆದ್ದು ಹೋಗ್ತಿನಿ. 2018ರಲ್ಲಿ ಈಶ್ವರಪ್ಪ ಪರಿಸ್ಥಿತಿ ಏನಾಗಿತ್ತು ಗೊತ್ತು ತಾನೇ? ಅವರೇ ನಮ್ಮ ಪಕ್ಷಕ್ಕೆ ಬರುವುದಕ್ಕೆ ತಯಾರಾಗಿದ್ದರು. ಅವರ ಬಗ್ಗೆ ನಾನ್ಯಾಕೆ ಮಾತನಾಡಲಿ. ಅವರಿಗೂ ಒಂದು ನಿಂಬೆ ಹಣ್ಣು ಕೋಡೋಣ ಬಿಡಿ ಎಂದಿದ್ದರು.

Share This Article
Leave a Comment

Leave a Reply

Your email address will not be published. Required fields are marked *