ಕುಡಿದ ಮತ್ತಿನಲ್ಲಿ ವ್ಯಾನ್ ಅಡ್ಡಾದಿಡ್ಡಿ ಚಲಾಯಿಸಿ ಸರಣಿ ಅಪಘಾತಕ್ಕೆ ಕಾರಣವಾದ KSRP ಪೊಲೀಸ್!

Public TV
1 Min Read

ಬೆಂಗಳೂರು: ಕೆಎಸ್ಆರ್ ಪಿ ಪೊಲೀಸಪ್ಪ ಕುಡಿದ ಮತ್ತಿನಲ್ಲಿ ಇಲಾಖೆಯ ವ್ಯಾನ್ ನನ್ನು ಅಡ್ಡಾದಿಡ್ಡಿ ಚಲಾಯಿಸಿ ಸರಣಿ ಅಪಘಾತಕ್ಕೆ ಕಾರಣವಾದ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಸಿಂಗಸಂದ್ರ ಬಳಿ ನಡೆದಿದೆ.

ಹೊಸೂರು ಮುಖ್ಯರಸ್ತೆಯ ಸಿಂಗಸಂದ್ರ ಬಳಿ ಬುಧವಾರ ಕೆಎಸ್ಆರ್ ಪಿ 9ನೇ ಪಡೆಯ ಡ್ರೈವರ್ ಕುಡಿದ ಮತ್ತಿನಲ್ಲಿ ಅಡ್ಡಾಡಿದ್ದಿಯಾಗಿ ಇಲಾಖೆಯ ವ್ಯಾನ್ ಚಲಾಯಿಸಿದ ಪರಿಣಾಮ ಸರಣಿ ಅಪಘಾತವಾಗಿದ್ದು, ಒಂದು ಕಾರು ಹಾಗೂ ಬೈಕ್ ಜಖಂಗೊಂಡಿದೆ.

ಸ್ಥಳದಲ್ಲಿದ್ದ ಸಾರ್ವಜನಿಕರು ಕುಡುಕ ಪೊಲೀಸಪ್ಪನನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ ಇನ್ನು ಸ್ಥಳಕ್ಕೆ ಟ್ರಾಫಿಕ್ ಪೊಲೀಸರು ಆಗಮಿಸಿ ಕುಡುಕ ಪೊಲೀಸಪ್ಪ ವ್ಯಾನ್ ಸೈಡಿಗೆ ಹಾಕುವಂತೆ ವಿನಂತಿಸಿಕೊಳ್ಳುತ್ತಿದ್ದ ದೃಶ್ಯ ಮೊಬೈಲ್ ನಲ್ಲಿ ಸೆರೆಯಾಗಿದೆ.

ಈ ಸಂಬಂಧ ಎಲೆಕ್ಟ್ರಾನಿಕ್ ಸಿಟಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *