ಸರ್ಕಾರಿ ಬಸ್, ಕಾರು ಮುಖಾಮುಖಿ ಡಿಕ್ಕಿ – 9 ಮಂದಿಗೆ ಗಂಭೀರ ಗಾಯ

Public TV
1 Min Read

ಚಿಕ್ಕಮಗಳೂರು: ಸರ್ಕಾರಿ ಬಸ್ ಮತ್ತು ಕಾರು (Car) ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ 9 ಮಂದಿ ಗಂಭೀರ ಗಾಯಗೊಂಡ ಘಟನೆ ಚಿಕ್ಕಮಗಳೂರು (Chikkamagaluru) ಜಿಲ್ಲೆಯ ತರೀಕೆರೆ (Tarikere) ತಾಲೂಕಿನ ಬೆಲೇನಹಳ್ಳಿ ಗ್ರಾಮದ ಬಳಿ ನಡೆದಿದೆ.

ತರೀಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಕಾರಿನಲ್ಲಿದ್ದ 9 ಜನರು ಭದ್ರಾವತಿ (Bhadravathi) ಮೂಲದವರು ಎಂದು ತಿಳಿದುಬಂದಿದೆ. ಕೆಎಸ್‌ಆರ್‌ಟಿಸಿ (KSRTC) ಬಸ್ ಶಿವಮೊಗ್ಗದಿಂದ ತರೀಕೆರೆಗೆ ತೆರಳುತ್ತಿದ್ದು, ಕಾರು ತರೀಕೆರೆಯಿಂದ ಭದ್ರಾವತಿಗೆ ತೆರಳುತ್ತಿತ್ತು. ಈ ವೇಳೆ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಭೀಕರ ಅಪಘಾತ ಉಂಟಾಗಿದೆ. ಇದನ್ನೂ ಓದಿ: ರಕ್ತಚಂದನ ಸಾಗಿಸ್ತಿದ್ದ ಕಾರು ಭೀಕರ ಅಪಘಾತಕ್ಕೆ ಜಖಂ – ಪವಾಡವೆಂಬಂತೆ ಪಾರಾದ ಕಳ್ಳರು

ಸರ್ಕಾರಿ ಬಸ್ ಡಿಕ್ಕಿಯಾದ ರಭಸಕ್ಕೆ ಕಾರು ಸಂಪೂರ್ಣ ಜಖಂ ಆಗಿದ್ದು, ಕಾರಿನಲ್ಲಿದ್ದ 9 ಮಂದಿ ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಶಿವಮೊಗ್ಗದ (Shivamogga) ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ಋತುವಿನ ಸಮಸ್ಯೆ, 3 ದಿನ ಚಿಕಿತ್ಸೆ ಬಳಿಕ ಮಹಿಳೆ ಸಾವು – ಆಸ್ಪತ್ರೆ ವಿರುದ್ಧ ಸಂಬಂಧಿಕರ ಆಕ್ರೋಶ

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್