ಆರ್ಥಿಕ ಸಂಕಷ್ಟದಿಂದ ಮನನೊಂದು KSRTC ನೌಕರ ವಿಷ ಸೇವಿಸಿ ಆತ್ಮಹತ್ಯೆ

Public TV
1 Min Read

ನೆಲಮಂಗಲ: ಸಂಬಳ ಸರಿಯಾಗಿ ಬರದ ಕಾರಣಕ್ಕೆ ಆರ್ಥಿಕವಾಗಿ ಮನನೊಂದಿದ್ದ, ಕೆಎಸ್‌ಆರ್‌ಟಿಸಿ ನೌಕರ ವಿಷಸೇವನೆ ಮಾಡಿ ತನ್ನ ಮನೆಯಲ್ಲಿ ಸಾವಿಗೀಡಾಗಿದ್ದಾರೆ.

ಬೆಂಗಳೂರು ಹೊರವಲಯ ನೆಲಮಂಗಲ ನಗರದ ವಾಜರಹಳ್ಳಿಯಲ್ಲಿ ವಾಸವಾಗಿದ್ದ ವೆಂಕಟೇಶ್ ಆತ್ಮಹತ್ಯೆಗೆ ಶರಣಾದ ನೌಕರ. ಘಟಕ 01 ರ ಬೆಂಗಳೂರು ಕೇಂದ್ರಿಯ ವಿಭಾಗದಲ್ಲಿ ಚಾಲಕ-ನಿರ್ವಾಹಕ ಹುದ್ದೆಯಲ್ಲಿ ವೆಂಕಟೇಶ್ ಕೆಲಸ ಮಾಡುತ್ತಿದ್ದರು. ಈ ನಡುವೆ ಸರಿಯಾಗಿ ಸಂಬಳ ಬರದ ಕಾರಣ ವೆಂಕಟೇಶ್ ಆರ್ಥಿಕವಾಗಿ ಮನನೊಂದ್ದು, ವಿಷ ಸೇವನೆ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದನ್ನೂ ಓದಿ:  ನೀರು ಕುಡಿಯಲು ಬಂದು ಅಕ್ರಮ ವಿದ್ಯುತ್‍ಗೆ ವ್ಯಕ್ತಿ ಬಲಿ

ಆತ್ಮಹತ್ಯೆ ಮಾಡಿಕೊಂಡ ವೆಂಕಟೇಶ್ ಮೃತ ದೇಹವನ್ನು ನೆಲಮಂಗಲ ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇಡಲಾಗಿದ್ದು, ನೆಲಮಂಗಲ ಟೌನ್ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಹೆಚ್ಚಿನ ಪರಿಶೀಲನೆ ನಡೆಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *