ಬ್ರಾಹ್ಮಣ ಸಮಾಜಕ್ಕೆ ಅವಹೇಳನ ಮಾಡಿಲ್ಲ- ಭಾರೀ ವಿರೋಧದ ಬಳಿಕ ಹೆಚ್‍ಡಿಕೆ ಸ್ಪಷ್ಟನೆ

Public TV
2 Min Read

ಬೆಂಗಳೂರು: ರಾಜ್ಯದಲ್ಲಿ ಬ್ರಾಹ್ಮಣ ಸಿಎಂ ಹೇಳಿಕೆ ಕುರಿತು ಭಾರೀ ವಿರೋಧ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ಇದೀಗ ಬ್ರಾಹ್ಮಣ ಸಮುದಾಯದ ಬಳಿ ಮನವಿ ಮಾಡಿಕೊಂಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಬ್ರಾಹ್ಮಣ (Brahmin) ಮಹಾಸಭಾಕ್ಕೆ ನಾನು ಮನವಿ ಮಾಡುತ್ತೇನೆ. ಬ್ರಾಹ್ಮಣ ಸಮುದಾಯದ ವಿರುದ್ಧ ನಾನು ಹೇಳಿಕೆ ಕೊಟ್ಟಿಲ್ಲ. ಬ್ರಾಹ್ಮಣ ಸಮಾಜಕ್ಕೆ ಅವಹೇಳನ ಮಾಡಿಲ್ಲ. ಈ ರಾಜ್ಯದಲ್ಲಿ ಬ್ರಾಹ್ಮಣ ಸಿಎಂ ಆಗಲಿ ಎಂದರು.

ನಾನು ಸಿಎಂ ಆಗಿದ್ದಾಗಲೇ ಬ್ರಾಹ್ಮಣ ಮಹಾಸಭಾಗೆ ಬನಶಂಕರಿ ಬಳಿ ಜಾಗ ಕೊಟ್ಟಿರುವುದಾಗಿದೆ. ಎರಡನೇ ಬಾರಿ ಸಿಎಂ ಆಗಿದ್ದಾಗ ಬ್ರಾಹ್ಮಣ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಿರುವುದು. ಯಾವುದೇ ಸಮಾಜದಿಂದಾದರೂ ಸಿಎಂ ಆಗಲಿ. ಅದಕ್ಕೆ ನನ್ನ ವಿರೋಧ ಇಲ್ಲ. ನಾನು ಸಹ ಇದಕ್ಕೆ ಬೆಂಬಲ ಕೊಡುತ್ತೇನೆ ಎಂದು ಸ್ಪಷ್ಟನೆ ನೀಡಿದರು. ಇದನ್ನೂ ಓದಿ: ಯಾವ ಜಾತಿಯ ಬಗ್ಗೆಯೂ ಹೀನಾಯವಾಗಿ ಮಾತಾಡಬಾರದು: ಡಿ.ಸಿ ತಮ್ಮಣ್ಣ

ಬಿಜೆಪಿ ಸರ್ಕಾರ (BJP Government) ಅಧಿಕಾರಕ್ಕೆ ಬಂದ ನಂತರ ಪಠ್ಯ ಪುಸ್ತಕ ತಿರುಚಿದರು. ಟಿಪ್ಪು ಬಗ್ಗೆ ಪ್ರಸ್ತಾಪ ಮಾಡಿದರು. ಕಲುಷಿತ ವಾತಾವರಣ ನಿರ್ಮಾಣ ಮಾಡಿದರು. ಆ ಕಾರಣಕ್ಕಾಗಿ ನಾನು ಕೆಲ ವ್ಯಕ್ತಿಗಳ ಬಗ್ಗೆ ಎಚ್ಚರಿಕೆಯಿಂದ ಇರಿ ಅಂತ ಹೇಳಿದೆ. ಶೃಂಗೇರಿ ಚಂದ್ರಮೌಳೇಶ್ವರ ದೇವಾಲಯ ಒಡೆದವರು ಯಾರು..?, ಗಾಂಧೀಜಿ ಕೊಂದವರು ಯಾರು..?. ಪೇಶ್ವೆ ವಂಶದವರು ಅಂತ ಹೇಳಿದೆ. ಇಂತಹವರನ್ನು ಸಿಎಂ ಮಾಡುವ ಹುನ್ನಾರ ನಡೆದಿದೆ ಅಂತ ಹೇಳಿದೆ. ನಮ್ಮ ಬ್ರಾಹ್ಮಣ ಸಮಾಜ ಸರ್ವೇಜನೋ ಸುಖಿನೋ ಭವಂತು ಅಂತಾರೆ. ಆದರೆ ಪೇಶ್ವೆ ಬ್ರಾಹ್ಮಣರು ನಾಶೋ ಬಹುಂತು ಅಂತಾರೆ. ಇದು ಕುವೆಂಪು ಹೇಳಿದಂತೆ ಸರ್ವ ಜನಾಂಗದ ತೋಟ ನಮ್ಮ ರಾಜ್ಯ ಎಂದರು.

ಪೇಶ್ವೆ ಸಮಾಜದ ಡಿಎನ್‍ಎ ಇರುವ ವ್ಯಕ್ತಿಯನ್ನು ಸಿಎಂ ಮಾಡಲು ಹುನ್ನಾರ ಮಾಡಿದ್ದಾರೆ ಅಂತ ಹೇಳಿದೆ. ಇದಕ್ಕೆ ಯಾಕೆ ಗಾಬರಿ…? ನಾನು ಯಾವುದೇ ಸಮಾಜಕ್ಕೆ ಅಗೌರವ ತೋರಿಲ್ಲ. ದೇಶದ ಇತಿಹಾಸದಲ್ಲಿ ನಡೆದ ಬೆಳವಣಿಗೆ ಹೇಳಿದ್ದೇನೆ. ನಾನು ಕೊಟ್ಟ ಹೇಳಿಕೆ ಬ್ರಾಹ್ಮಣ ಸಮಾಜದ ಅವಹೇಳನ ಅಲ್ಲ. ಹಳೆಯ ಕರ್ನಾಟಕದಲ್ಲಿ ಇರುವ ಬ್ರಾಹ್ಮಣ ಸಮಾಜ ಸುಸಂಸ್ಕೃತ ಸಮಾಜ. ಬ್ರಾಹ್ಮಣ ಸಮಾಜದ ಬಗ್ಗೆ ಗೌರವವಿದೆ. ನಮ್ಮ ಕುಟುಂಬ ಬ್ರಾಹ್ಮಣ ಸಮಾಜ ಮತ್ತು ಶೃಂಗೇರಿ (Sringeri) ಬಗ್ಗೆ ಗೌರವ ಇಟ್ಟುಕೊಂಡಿದ್ದೇವೆ ಎಂದು ಹೆಚ್‍ಡಿಕೆ ತಿಳಿಸಿದರು.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *