ಟಿಕೆಟ್ ಗೊಂದಲ ನಿವಾರಣೆಗೆ ಅಖಾಡಕ್ಕಿಳಿದ ಕುಮಾರಸ್ವಾಮಿ – ತಿಂಗಳಾಂತ್ಯಕ್ಕೆ ಹಾಸನದಲ್ಲಿ ಸಭೆ

Public TV
1 Min Read

ಬೆಂಗಳೂರು: ಹಾಸನ (Hassan) ಟಿಕೆಟ್ ವಿಚಾರದಲ್ಲಿ ಜೆಡಿಎಸ್‌ನಲ್ಲಿ (JDS) ಇನ್ನೂ ಗೊಂದಲ ಮುಗಿದಿಲ್ಲ. ಹೀಗಾಗಿ ಖುದ್ದು ಮಾಜಿ ಸಿಎಂ ಕುಮಾರಸ್ವಾಮಿ (HD Kumaraswamy) ಅಖಾಡಕ್ಕೆ ಇಳಿದಿದ್ದಾರೆ. ಈ ಮೂಲಕ ಹಾಸನ ಟಿಕೆಟ್ ಗೊಂದಲಕ್ಕೆ ಬ್ರೇಕ್ ಹಾಕೋದಕ್ಕೆ ಮುಂದಾಗಿದ್ದಾರೆ.

ಹಾಸನ ಟಿಕೆಟ್ ಗೊಂದಲ ವಿಚಾರದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಈ ತಿಂಗಳಲ್ಲಿ ಸಭೆ ನಡೆಸಲು ನಿರ್ಧಾರ ಮಾಡಿದ್ದಾರೆ. ಸಭೆಯಲ್ಲಿ ಟಿಕೆಟ್ ಯಾರಿಗೆ ಕೊಡಬೇಕು ಎಂದು ನಿರ್ಧಾರ ಮಾಡಲಿದ್ದಾರೆ. ಭವಾನಿ ರೇವಣ್ಣ (Bhavani Revanna), ಸ್ವರೂಪ್ (Swaroop) ನಡುವೆ ಟಿಕೆಟ್‌ಗಾಗಿ ಫೈಟ್ ನಡೆಯತ್ತಿದ್ದು, ಈ ಸಭೆ ಮಹತ್ವ ಪಡೆದುಕೊಂಡಿದೆ.

ಭವಾನಿ ಮತ್ತು ಸ್ವರೂಪ್‌ರನ್ನು ಕೂರಿಸಿ ಗೊಂದಲಕ್ಕೆ ತೆರೆ ಎಳೆಯಲು ಕುಮಾರಸ್ವಾಮಿ ಪ್ಲ್ಯಾನ್ ಮಾಡಿದ್ದಾರೆ. ಸಭೆಯಲ್ಲಿ ಕುಮಾರಸ್ವಾಮಿ ಕ್ಷೇತ್ರದ ನಾಯಕರು, ಕಾರ್ಯಕರ್ತರ ಅಭಿಪ್ರಾಯ ಸಂಗ್ರಹ ಮಾಡಿ ಅಂತಿಮ ನಿರ್ಧಾರ ಘೋಷಣೆ ಮಾಡಲಿದ್ದಾರೆ. ಇದನ್ನೂ ಓದಿ: ಶರಾವತಿ ಸಂತ್ರಸ್ತರಿಗೆ ಜಮೀನು ಹಕ್ಕುಪತ್ರ ನೀಡಲು ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಕೆ: ಬಿಎಸ್‌ವೈ

ಹಾಸನದಲ್ಲಿ ಸಭೆ ಮಾಡಿ ಕ್ಷೇತ್ರದ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹ ಮಾಡುವುದು, ಕಾರ್ಯಕರ್ತರ ಜೊತೆ ಕ್ಷೇತ್ರದ ಮುಖಂಡರ ಅಭಿಪ್ರಾಯ ಸಂಗ್ರಹ ಮಾಡುವುದು, ಕ್ಷೇತ್ರದಲ್ಲಿ ಯಾರ ಪರ ಒಲವಿದೆ ಎಂದು ಅಭಿಪ್ರಾಯ ಸಂಗ್ರಹ ಮಾಡಿ, ಯಾರಿಗೆ ಟಿಕೆಟ್ ಕೊಟ್ಟರೆ ಉತ್ತಮ ಎಂದು ಜನಾಭಿಪ್ರಾಯ ಸಂಗ್ರಹ ಮಾಡುವ ಪ್ಲ್ಯಾನ್ ಮಾಡಿದ್ದಾರೆ.

ಗೊಂದಲಕ್ಕೆ ಕಾರಣವಾಗಿರುವ ಭವಾನಿ ರೇವಣ್ಣ ಮತ್ತು ಸ್ವರೂಪ್‌ರನ್ನು ಕೂರಿಸಿ ಸಂಧಾನ ಮಾಡಿಸುವುದು, ಇಬ್ಬರಲ್ಲಿ ಯಾರಿಗೆ ಟಿಕೆಟ್ ಕೊಟ್ಟರೂ ಅವರ ಪರ ಕೆಲಸ ಮಾಡುವಂತೆ ಇಬ್ಬರನ್ನೂ ಮನವೊಲಿಸುವುದು, ಅಂತಿಮವಾಗಿ ಕಾರ್ಯಕರ್ತರ, ಮುಖಂಡರ ಅಭಿಪ್ರಾಯ ಸಂಗ್ರಹ ಮಾಡಿ ಟಿಕೆಟ್ ಘೋಷಣೆ ಮಾಡುವುದು ಕುಮಾರಸ್ವಾಮಿ ಅವರ ಪ್ಲ್ಯಾನ್ ಆಗಿದೆ. ಇದನ್ನೂ ಓದಿ: ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ ದೂರುಗಳ ಸುರಿಮಳೆ – 7 ಕೇಸ್ ದಾಖಲು

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *