ಆತ್ಮಹತ್ಯೆಗೆ ಶರಣಾದ ರೈತರಿಗೆ ಮಾಜಿ ಸಿಎಂರಿಂದ ಧನ ಸಹಾಯ

Public TV
1 Min Read

ಚಿಕ್ಕಮಗಳೂರು: ಪರಿಹಾರ ಸಿಗದ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಶರಣಾದ ರೈತರ ಮನೆಗಳಿಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಭೇಟಿ ಕೊಟ್ಟಿದ್ದು, ಧನ ಸಹಾಯ ಮಾಡಿದ್ದಾರೆ.

ಪರಿಹಾರ ಸಿಗದ ಹಿನ್ನೆಲೆಯಲ್ಲಿ ಗದ್ದೆಯಲ್ಲಿ ಗುಂಡು ಹಾರಿಸಿಕೊಂಡು ಚನ್ನಪ್ಪಗೌಡ ಆತ್ಮಹತ್ಯೆ ಮಾಡಿಕೊಂಡಿದ್ದರು. ಎನ್.ಕೆ.ಮೇಗಲ್ ಗ್ರಾಮದಲ್ಲಿ ವಿಷ ಕುಡಿದು ಚಂದ್ರೇಗೌಡ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಮೂಡಿಗೆರೆ ತಾಲೂಕಿನ ಕಳಸಕ್ಕೆ ಭೇಟಿ ಕೊಟ್ಟಿದ್ದು, ಮೃತ ರೈತರ ಮನೆಗೆ ತೆರಳಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ್ದಾರೆ. ಅಷ್ಟೇ ಅಲ್ಲದೇ ಮೃತ ರೈತರ ಕುಟುಂಬಗಳಿಗೆ ಧನ ಸಹಾಯ ಮಾಡಿದ್ದಾರೆ.

ಕುಮಾರಸ್ವಾಮಿ ಅವರು ವೈಯಕ್ತಿಕವಾಗಿ ಚಂದ್ರೇಗೌಡ ಹಾಗೂ ಚನ್ನಪ್ಪಗೌಡ ಕುಟುಂಬಸ್ಥರಿಗೆ ಧನ ಸಹಾಯ ಮಾಡಿದ್ದಾರೆ. ಚಂದ್ರೇಗೌಡ ಕುಟುಂಬಕ್ಕೆ 2 ಲಕ್ಷ ರೂ. ಹಾಗೂ ಚನ್ನಪ್ಪಗೌಡ ಕುಟುಂಬಕ್ಕೆ 1 ಲಕ್ಷ ರೂ. ಧನ ಸಹಾಯ ಮಾಡಿದ್ದಾರೆ. ಪ್ರವಾಹ ಮತ್ತು ಗುಡ್ಡ ಕುಸಿತದ ಬಳಿಕ ಜಿಲ್ಲೆಗೆ 2ನೇ ಬಾರಿಗೆ ಮಾಜಿ ಸಿಎಂ ಕುಮಾರಸ್ವಾಮಿ ಭೇಟಿ ನೀಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *