ಕೊಟ್ರೆ ಬೇರೆ ಖಾತೆ ಕೊಡಿ ಇಲ್ದೆ ಹೋದ್ರೆ ರಾಜೀನಾಮೆ ತಗೊಳ್ಳಿ- ಸಿಎಂ ಎದುರು ಸಚಿವ ಅಳಲು

Public TV
1 Min Read

ಬೆಂಗಳೂರು: ಐಎಎಸ್ ಅಧಿಕಾರಿಯ ವರ್ತನೆಗೆ ಬೇಸತ್ತ ಸಚಿವರೊಬ್ಬರು ಕೊಟ್ರೆ ಬೇರೆ ಖಾತೆ ಕೊಡಿ ಇಲ್ಲದೇ ಹೋದ್ರೆ ರಾಜೀನಾಮೆ ತೆಗೆದುಕೊಳ್ಳಿ ಅಂತ ಹೇಳಿದ್ದಾರೆ.

ಐಎಎಸ್ ಅಧಿಕಾರಿ ಆದಿತ್ಯ ಬಿಸ್ವಾಸ್ ಅವರ ಆಡಳಿತಕ್ಕೆ ಬೇಸತ್ತು ಕಾರ್ಮಿಕ ಸಚಿವ ವೆಂಕಟರಮಣಪ್ಪ ಅವರು ಇದೀಗ ಖಾತೆ ಬದಲಾವಣೆಗೆ ಪಟ್ಟು ಹಿಡಿದಿದ್ದಾರೆ ಎಂಬುದಾಗಿ ಮೂಲಗಳಿಂದ ಪಬ್ಲಿಕ್ ಟಿವಿಗೆ ಮಾಹಿತಿ ಲಭಿಸಿದೆ.

ಆದಿತ್ಯ ಬಿಸ್ವಾಸ್ ನನ್ನ ಮಾತಿಗೆ ಬೆಲೆ ಕೊಡಲ್ಲ. ನನ್ನ ವಿರುದ್ಧ ಕೆಲಸ ಮಾಡುತ್ತಾರೆ. ನನ್ನ ಇಲಾಖೆಯಲ್ಲಿ ಏನು ನಡೆಯುತ್ತಿದೆ ಅನ್ನೋದೇ ನನಗೆ ಗೊತ್ತಾಗುತ್ತಿಲ್ಲ. ನನ್ನ ಮಾತಿಗೆ ಬೆಲೆ ಇಲ್ಲದ ಮೇಲೆ ಈ ಖಾತೆ ಇದ್ದರೆಷ್ಟು ಬಿಟ್ಟರೆಷ್ಟು. ಹೀಗಾಗಿ ನನ್ನ ಖಾತೆ ಬದಲಾವಣೆ ಮಾಡಿ, ಇಲ್ಲವೇ ರಾಜೀನಾಮೆ ತೆಗೆದುಕೊಳ್ಳಿ ಅಂತ ಕಾರ್ಮಿಕ ಸಚಿವರು ಸಿಎಂ ಕುಮಾರಸ್ವಾಮಿ ಮುಂದೆ ತನ್ನ ಅಳಲು ತೋಡಿಕೊಂಡಿಕೊಂಡಿದ್ದಾರೆ ಎನ್ನಲಾಗಿದೆ.

ನನ್ನ ಖಾತೆಯೇ ನನಗೆ ಮರೆತು ಹೋಗಿದೆ. ಎಲ್ಲಾ ಟೆಂಡರ್ ಗಳನ್ನು ಅವರೇ ಕರೆಯುತ್ತಾರೆ. ಗುತ್ತಿಗೆ ಆಧಾರದ ಮೇಲೆ ಅವರೆ ಉದ್ಯೋಗ ನೇಮಕಾತಿ ಮಾಡಿಕೊಳ್ಳುತ್ತಾರೆ. ಏಕಪಕ್ಷೀಯವಾಗಿ ನಿರ್ಧಾರ ತೆಗೆದುಕೊಳ್ಳುತ್ತಾರೆ. ಇಷ್ಟೆಲ್ಲ ಇದ್ದ ಮೇಲೆ ನನಗೆ ಸಚಿವ ಸ್ಥಾನ ಯಾಕೆ ಅಂತ ಪ್ರಶ್ನಿಸಿದ ಸಚಿವರು, ಕೇವಲ ಸಹಿ ಹಾಕಿಕೊಂಡು ಕೂರಲು ಸಾಧ್ಯವಿಲ್ಲ. ಈ ಬಾರಿಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಖಾತೆ ಬದಲಾವಣೆ ಮಾಡಿ ಅಂತ ವೆಂಕಟರಮಣಪ್ಪ ಬಿಗಿ ಪಟ್ಟು ಹಿಡಿದಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Share This Article
Leave a Comment

Leave a Reply

Your email address will not be published. Required fields are marked *