ಲಖೀಂಪುರ ಖೇರಿ ಪ್ರಕರಣ – ಆಶಿಶ್ ಮಿಶ್ರಾ ಜಾಮೀನು ಅರ್ಜಿ ವಜಾ

Public TV
1 Min Read

ಲಕ್ನೋ: ಲಖೀಂಪುರ ಖೇರಿ ಪ್ರಕರಣಕ್ಕೆ ಸಂಬಂಧ ಕೇಂದ್ರ ಗೃಹ ರಾಜ್ಯ ಖಾತೆ ಸಚಿವ ಅಜಯ್ ಮಿಶ್ರಾಗೆ ಮತ್ತೊಮ್ಮೆ ಹಿನ್ನಡೆಯಾಗಿದ್ದು ಪುತ್ರ ಆಶಿಶ್ ಮಿಶ್ರಾಗೆ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಜಾ ಆಗಿದೆ. ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಮುಖೇಶ್ ಮಿಶ್ರಾ ಅವರು ಈ ಅದೇಶ ಹೊರಡಿಸಿದ್ದಾರೆ.

ಪ್ರಕರಣ ತೀವ್ರ ಸ್ವರೂಪದಾಗಿದ್ದು, ಗಂಭೀರವಾಗಿದೆ. ಅಲ್ಲದೇ ತನಿಖೆ ಇನ್ನೂ ಚಾಲ್ತಿಯಲ್ಲಿದ್ದು ಈ ಹಂತದಲ್ಲಿ ಜಾಮೀನು ನೀಡದಂತೆ ಸರ್ಕಾರದ ಪರ ವಕೀಲ ಅರವಿಂದ್ ತ್ರಿಪಾಠಿ ವಾದ ಮಂಡಿಸಿದ್ದರು. ಕಳೆದ ತಿಂಗಳು ಮಿಶ್ರಾ ಅವರ ಜಾಮೀನು ಅರ್ಜಿಯನ್ನು ಲಖೀಂಪುರ ಖೇರಿಯಲ್ಲಿನ ಮ್ಯಾಜಿಸ್ಟ್ರೇಟ್ ಕೋರ್ಟ್ ತಿರಸ್ಕರಿಸಿತ್ತು. ಪ್ರಕರಣ ತೀವ್ರತೆ ಅರಿತ ಕೋರ್ಟ್ ಆಶಿಶ್ ಮಿಶ್ರಾ ಸೇರಿ ಇತರೆ ಇಬ್ಬರು ಆರೋಪಿಗಳ ಜಾಮೀನು ಅರ್ಜಿ ತಿರಸ್ಕರಿಸಿದೆ.

ಕೇಂದ್ರ ಸರ್ಕಾರ ಜಾರಿ ತಂದಿರುವ ಮೂರು ಕೃಷಿ ಕಾನೂನುಗಳ ವಿರುದ್ಧ ನಡೆಯುತ್ತಿದ್ದ ಪ್ರತಿಭಟನೆ ವೇಳೆ ಆಶಿಶ್ ಮಿಶ್ರಾಗೆ ಸಂಬಂಧಿಸಿದ ಕಾರನ್ನು ರೈತರು ಮೇಲೆ ಹರಿಸಲಾಗಿತ್ತು. ಪರಿಣಾಮ ಸ್ಥಳದಲ್ಲಿ 8 ಮಂದಿ ರೈತರು ಸಾವನ್ನಪ್ಪಿದ್ದರು. ಇದನ್ನೂ ಓದಿ: ನಾಥೂರಾಮ್ ಗೋಡ್ಸೆ ಪ್ರತಿಮೆ ಧ್ವಂಸಗೊಳಿಸಿದ ಕಾಂಗ್ರೆಸ್ಸಿಗರು!

12 ಗಂಟೆಗಳ ವಿಚಾರಣೆಯ ಬಳಿಕ ವಿಶೇಷ ತನಿಖಾ ತಂಡ (ಎಸ್‍ಐಟಿ) ಅಕ್ಟೋಬರ್ 9 ರಂದು ಆಶಿಶ್ ಮಿಶ್ರಾರನ್ನ ಬಂಧಿಸಿತು ಮತ್ತು ಮೂರು ದಿನಗಳ ಪೊಲೀಸ್ ಕಸ್ಟಡಿಗೆ ಕಳುಹಿಸಲಾಯಿತು. ನವೆಂಬರ್ 15 ರಂದು ಸುಪ್ರೀಂಕೋರ್ಟ್ ಎಸ್‍ಐಟಿ ತನಿಖೆಯನ್ನು ಬೇರೆ ರಾಜ್ಯದ ನಿವೃತ್ತ ಹೈಕೋರ್ಟ್ ನ್ಯಾಯಾಧೀಶರಿಂದ ಮೇಲ್ವಿಚಾರಣೆ ಮಾಡಬೇಕೆಂದು ಹೇಳಿತ್ತು. ಪ್ರಕರಣ ಸಂಬಂಧ ಈವರೆಗೂ ಮಿಶ್ರಾ ಸೇರಿದಂತೆ ಇದುವರೆಗೆ 13 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *