ಧರ್ಮಸ್ಥಳ ಲಕ್ಷ ದೀಪೋತ್ಸವ – ಕ್ಷೇತ್ರಾದ್ಯಂತ ಝಗಮಗಿಸ್ತಿದೆ ವಿದ್ಯುತ್ ದೀಪಗಳು

Public TV
1 Min Read

ಮಂಗಳೂರು: ಪುಣ್ಯಕ್ಷೇತ್ರ ಧರ್ಮಸ್ಥಳದಲ್ಲಿ ಈಗ ಲಕ್ಷ ದೀಪೋತ್ಸವದ ಸಂಭ್ರಮ. ಶುಕ್ರವಾರದಿಂದ ಧರ್ಮಸ್ಥಳ ಕ್ಷೇತ್ರಾದ್ಯಂತ ವಿದ್ಯುತ್ ದೀಪಗಳು ಝಗಮಗಿಸುತ್ತಿದ್ದು, ವರ್ಷಂಪ್ರತಿಯಂತೆ ಕ್ಷೇತ್ರದ ಪರಿಸರ ದೀಪಗಳಿಂದ ಕಂಗೊಳಿಸಲಿದೆ.

ಈ ಸಂದರ್ಭದಲ್ಲಿ ಲಕ್ಷಾಂತರ ಭಕ್ತರು ಆಗಮಿಸಲಿದ್ದು, ಮಂಜುನಾಥನ ದರ್ಶನ ಪಡೆಯಲಿದ್ದಾರೆ. ಇದೇ ವೇಳೆ, ಸರ್ವ ಧರ್ಮ ಸಮ್ಮೇಳನ ಮತ್ತು ಸಾಹಿತ್ಯ ಸಮ್ಮೇಳನವೂ ಜರಗಲಿದೆ. ನ.25ರಂದು 84ನೇ ವರ್ಷದ ಸರ್ವ ಧರ್ಮ ಸಮ್ಮೇಳನ ಹಾಗೂ 26ರಂದು ಸಾಹಿತ್ಯ ಸಮ್ಮೇಳನ ಜರುಗಲಿದ್ದು ಸರ್ವ ಧರ್ಮಗಳ ಸಾಹಿತ್ಯಾಸಕ್ತರನ್ನು ಆಕರ್ಷಿಸಲಿದೆ.

ಈ ಬಾರಿಯ ಸರ್ವ ಧರ್ಮ ಸಮ್ಮೇಳನವನ್ನು ಮಾಜಿ ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ ಉದ್ಘಾಟಿಸಲಿದ್ದಾರೆ. ಪ್ರತಿ ವರ್ಷ ಕಾರ್ತಿಕ ಮಾಸದಲ್ಲಿ ನಡೆಯುವ ಈ ಲಕ್ಷ ದೀಪೋತ್ಸವದ ವಿಶೇಷ ಎಂದರೆ, ಉತ್ಸವದ ಕೊನೆಯ ದಿನ ದೇವರ ಮೂರ್ತಿಯನ್ನು ಹೊತ್ತು ಭಕ್ತರ ದರ್ಶನಕ್ಕಾಗಿ ಮೆರವಣಿಗೆ ನಡೆಯಲಿದೆ.

ಮಂಜುನಾಥನ ಮೂರ್ತಿಯೊಂದಿಗೆ ಕ್ಷೇತ್ರದ ಆವರಣದಲ್ಲಿ ಮೆರವಣಿಗೆ ನಡೆದು, ಐದು ಕಟ್ಟೆಗಳಲ್ಲಿ ಪೂಜೆ ನಡೆಯಲಿದೆ. ಹಿಂದಿನ ಕಾಲದಲ್ಲಿ ಲಕ್ಷ ದೀಪಗಳಿಂದಲೇ ಕ್ಷೇತ್ರವನ್ನು ಝಗಮಗಿಸುತ್ತಿದ್ದರೆ, ಈಗಿನ ಕಾಲದಲ್ಲಿ ವಿದ್ಯುತ್ ದೀಪಗಳಿಂದ ಧರ್ಮಸ್ಥಳ ಕ್ಷೇತ್ರ ಕಂಗೊಳಿಸುವಂತೆ ಮಾಡಲಾಗುತ್ತಿದೆ.

Share This Article
Leave a Comment

Leave a Reply

Your email address will not be published. Required fields are marked *