ಮಾನ್ವಿಯಲ್ಲಿ ಲಕ್ಷದೀಪೋತ್ಸವ ಸಂಭ್ರಮ

Public TV
1 Min Read

ರಾಯಚೂರು: ಕಾರ್ತಿಕ ಮಾಸದ ಪ್ರಯುಕ್ತ ಮಾನ್ವಿಯಲ್ಲಿ ಬೆಳಕಿನ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ.

ಮಾನ್ವಿ ಪಟ್ಟಣದ ಶ್ರೀ ಕಲ್ಯಾಣ ವೆಂಕಟೇಶ್ವರ ದೇವಾಲಯಲ್ಲಿ ವಿಭಿನ್ನ ರೀತಿಯಲ್ಲಿ ಲಕ್ಷ ದೀಪೋತ್ಸವನ್ನು ಅದ್ಧೂರಿಯಾಗಿ ಆಚರಿಸಲಾಯಿತು. ದೀಪಗಳಿಂದಲೇ ಹಲವಾರು ಚಿತ್ತಾರಗಳನ್ನು ಬಿಡಿಸಲಾಯಿತು.

ಶಿವಲಿಂಗದ ರೂಪ, ಓಂ, ಸ್ವಸ್ತಿಕ ಸೇರಿ ವಿವಿಧ ಚಿತ್ತಾರಗಳು ಮಣ್ಣಿನ ದೀಪದಲ್ಲೇ ಅರಳಿತ್ತು. ಅತೀ ವಿಜೃಂಭಣೆಯಿಂದ ಆಚರಿಸುತ್ತಿರುವ ಲಕ್ಷ ದೀಪೋತ್ಸವದಲ್ಲಿ ಭಾಗವಹಿಸುವ ಭಕ್ತರಿಗೆ ಸಕಲ ವ್ಯವಸ್ಥೆಗಳನ್ನ ಕಲ್ಪಿಸಲಾಗಿತ್ತು. ಶ್ರೀ ಶಿರಡಿ ಸಾಯಿಬಾಬಾ ಭಕ್ತರ ಸಂಘ ಲಕ್ಷದೀಪೋತ್ಸವದ ಜವಾಬ್ದಾರಿಯನ್ನು ಹೊತ್ತುಕೊಂಡಿತ್ತು.

ವಯಸ್ಸಿನ ಬೇಧವಿಲ್ಲದೆ ಯುವತಿಯರು, ಮಹಿಳೆಯರು ದೀಪಗಳನ್ನು ಬೆಳಗಿಸಿ ಪ್ರಾರ್ಥನೆ ಸಲ್ಲಿಸಿದರು. ಲಕ್ಷ ದೀಪೋತ್ಸವದಲ್ಲಿ ಭಾಗವಹಿಸಿದ ಭಕ್ತರಿಗೆ ಪ್ರಸಾದ, ಅನ್ನಸಂತರ್ಪಣೆ ವ್ಯವಸ್ಥೆ ಮಾಡಲಾಗಿತ್ತು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *