ಲಾಲೂ ಪ್ರಸಾದ್ ಯಾದವ್ ಆರೋಗ್ಯ ಚಿಂತಾಜನಕ- ಪಾಟ್ನಾದಿಂದ ದೆಹಲಿಗೆ ಏರ್‌ಲಿಫ್ಟ್

Public TV
1 Min Read

ನವದೆಹಲಿ: ರಾಷ್ಟ್ರೀಯ ಜನತಾ ದಳ(ಆರ್‌ಜೆಡಿ) ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಆರೋಗ್ಯ ಸ್ಥಿತಿ ತೀವ್ರ ಚಿಂತಾಜನಕವಾಗಿದೆ. ಆರೋಗ್ಯ ಪರಿಸ್ಥಿತಿ ಗಂಭೀರವಾಗುತ್ತಿರುವ ಹಿನ್ನೆಲೆಯಲ್ಲಿ ಅವರನ್ನು ನಿನ್ನೆ ತಡರಾತ್ರಿ ಪಾಟ್ನಾದ ಖಾಸಗಿ ಆಸ್ಪತ್ರೆಯಿಂದ ಏರ್‌ಲಿಫ್ಟ್ ಮಾಡಿ ದೆಹಲಿಯ ಏಮ್ಸ್‌ಗೆ ದಾಖಲಿಸಲಾಗಿದೆ.

ಎರಡು ದಿನಗಳ ಹಿಂದೆ ಪತ್ನಿ ರಾಬ್ರಿ ದೇವಿ ನಿವಾಸದ ಮೆಟ್ಟಿಲುಗಳಿಂದ ಲಾಲೂ ಬಿದ್ದಿದ್ದರು. ಇದರಿಂದಾಗಿ ಅವರ ದೇಹವು ಮೂರು ಸ್ಥಳಗಳಲ್ಲಿ ಮುರಿತ ಕಂಡು ಬಂದಿತ್ತು. ಈಗಾಗಲೇ ಅನೇಕ ಖಾಯಿಲೆಗಳೊಂದಿಗೆ ಹೋರಾಡುತ್ತಿದ್ದ ಅವರಿಗೆ ಈ ಮೂಳೆ ಆರೋಗ್ಯ ಪರಿಸ್ಥಿತಿಯನ್ನು ಗಂಭೀರವಾಗಿಸಿದೆ.

ಲಾಲೂ ಪ್ರಸಾದ್ ಯಾದವ್ ದೆಹಲಿ ತಲುಪಿದ ನಂತರ ಅವರ ಪುತ್ರ ತೇಜಸ್ವಿ ಯಾದವ್ ಅವರ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ್ದು, ಮೆಟ್ಟಿಲುಗಳಿಂದ ಬಿದ್ದ ಕಾರಣ ಅವರ ದೇಹದ ಮೂರು ಸ್ಥಳಗಳಲ್ಲಿ ಮುರಿತವಾಗಿದೆ. ಇದರಿಂದ ಅವರು ಚಲಿಸಲು ಸಾಧ್ಯವಾಗುತ್ತಿಲ್ಲ. ಏಮ್ಸ್ ವೈದ್ಯರು ಆರೋಗ್ಯ ತಪಾಸಣೆ ನಡೆಸಿದ್ದು, ಮುಂದಿನ ಚಿಕಿತ್ಸೆ ಬಗ್ಗೆ ನಿರ್ಧರಿಸಲಿದ್ದಾರೆ ಎಂದು ಅವರು ಹೇಳಿದ್ದರು. ಇದನ್ನೂ ಓದಿ: ನಿಮ್ಮ ಮದುವೆ ಯಾವಾಗ – ರಾಘವ್ ಚಡ್ಡಾಗೆ ಪ್ರಶ್ನೆ

ಯಾದವ್ ಕುಟುಂಬದ ಮೂಲಗಳ ಪ್ರಕಾರ ಲಾಲೂ ಪ್ರಸಾದ್ ಯಾದವ್ ಶ್ವಾಸಕೋಶದಲ್ಲಿ ನೀರು ತುಂಬಿದೆ. ಇದರಿಂದ ಅವರ ಆರೋಗ್ಯ ಸಮಸ್ಯೆಗಳು ಹೆಚ್ಚಾಗುತ್ತಿವೆ. ಅದೇ ಸಮಯದಲ್ಲಿ, ಅವರ ಕ್ರಿಯೇಟಿನೈನ್ ಕೂಡ ನಾಲ್ಕರಿಂದ ಆರು ತಲುಪಿದೆ. ಕಿಡ್ನಿ ಕಸಿ ಬಗ್ಗೆಯೂ ವರ್ಣಿಸಲಾಗುತ್ತಿದೆ. ಲಾಲೂ ಕೊಂಚ ಚೇತರಿಸಿಕೊಂಡ ನಂತರ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಸಿಂಗಾಪುರಕ್ಕೆ ಕರೆದೊಯ್ಯಲು ವೈದ್ಯರೊಂದಿಗೆ ಸಮಾಲೋಚನೆ ನಡೆಸಲಾಗುತ್ತಿದೆ. ಇದನ್ನೂ ಓದಿ: ಒಂದು ವಾರದೊಳಗೆ ಅಡುಗೆ ಎಣ್ಣೆ ಬೆಲೆ ಇಳಿಕೆಗೆ ಕೇಂದ್ರ ಸರ್ಕಾರ ಸೂಚನೆ

ಈ ನಡುವೆ ಲಾಲೂ ಪ್ರಸಾದ್ ಯಾದವ್ ಪತ್ನಿ ರಾಬ್ರಿ ದೇವಿ ಜನರಿಗೆ ಭಾವನಾತ್ಮಕ ಮನವಿ ಮಾಡಿದ್ದಾರೆ. ಬೇಸರ ಪಡುವುದು ಬೇಡ, ಆತಂಕ ಪಡುವ ಅಗತ್ಯವಿಲ್ಲ, ಅವರು ಚೇತರಿಸಿಕೊಳ್ಳುತ್ತಿದ್ದಾರೆ, ನಮ್ಮೆಲ್ಲರೊಂದಿಗೆ ಅವರು ಇರಲೆಂದು ನೀವೆಲ್ಲರೂ ಅವರಿಗಾಗಿ ಪ್ರಾರ್ಥಿಸಿ ಎಂದು ಅಭಿಮಾನಿಗಳಿಗೆ ಮನವಿ ಮಾಡಿದ್ದಾರೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *