ಗಂಗಾವಳಿ ನದಿಯಲ್ಲಿ ಕೊಚ್ಚಿ‌ ಹೋಗಿದ್ದ ಟ್ಯಾಂಕರ್‌ನಿಂದ ಸೋರಿಕೆಯಾಗುತ್ತಿದೆ ಗ್ಯಾಸ್‌

Public TV
1 Min Read

ಕಾರವಾರ: ಗಂಗಾವಳಿ ನದಿಯಲ್ಲಿ ಕೊಚ್ಚಿ‌ ಹೋಗಿದ್ದ ಗ್ಯಾಸ್ ಟ್ಯಾಂಕರ್‌ನಿಂದ ಅನಿಲ ಸೋರಿಕೆ ಆಗುತ್ತಿರುವ ಆತಂಕಕಾರಿ ವಿಚಾರ ಬೆಳಕಿಗೆ ಬಂದಿದೆ.

ಶಿರೂರಿನಲ್ಲಿ ರಾಷ್ಟ್ರೀಯ ಹೆದ್ದಾರಿ 66ರ ಬಳಿ ಎರಡು ಗ್ಯಾಸ್ ಟ್ಯಾಂಕರ್ ಹಾಗೂ ಒಂದು ಲಾರಿಯನ್ನು ನಿಲ್ಲಿಸಲಾಗಿತ್ತು. ಏಕಾಏಕಿ ಗುಡ್ಡ ಕುಸಿದ ಪರಿಣಾಮ ಒಂದು ಗ್ಯಾಸ್ ಟ್ಯಾಂಕರ್ ಗಂಗಾವಳಿ ನದಿಗೆ ಹೋಗಿ ಬಿದ್ದಿದೆ. ಇದನ್ನೂ ಓದಿ: ದಕ್ಷಿಣ ಭಾರತದ ಮೊದಲ ರೋಡ್-ಕಮ್-ರೈಲು ಮೇಲ್ಸೇತುವೆ ಇಂದು ಬೆಂಗಳೂರಿನಲ್ಲಿ ಲೋಕಾರ್ಪಣೆ

 

ಗಂಗಾವಳಿ ನದಿ ವೇಗಕ್ಕೆ 7 ಕಿ.ಮೀ ದೂರಕ್ಕೆ ಕೊಚ್ಚಿ ಹೋಗಿರುವ ಟ್ಯಾಂಕರ್ ಈಗ ಸಗಡಗೇರಿ ಎಂಬಲ್ಲಿ ವಾಲಿ ನಿಂತಿದೆ. ಗ್ಯಾಸ್ ಟ್ಯಾಂಕರ್ ಸ್ಥಿತಿಯನ್ನು ಪರಿಶೀಲಿಸಲು ಬೋಟ್ ಮೂಲಕ ಭಾರತ್ ಗ್ಯಾಸ್‌ ತಜ್ಞರು ತೆರಳಿದಾಗ ಸೋರಿಕೆ ಆಗುತ್ತಿರುವ ವಿಚಾರ ಬೆಳಕಿಗೆ ಬಂದಿದೆ. ಇದನ್ನೂ ಓದಿ: ಒಮಾನ್‌ ಕರಾವಳಿಯಲ್ಲಿ ಮುಳುಗಿದ ತೈಲ ಟ್ಯಾಂಕರ್‌ – 13 ಭಾರತೀಯ ಸಿಬ್ಬಂದಿ ನಾಪತ್ತೆ

ನೀರಿನಲ್ಲಿ ಕೊಚ್ಚಿ ಹೋಗಿರುವ ಟ್ಯಾಂಕರ್‌ನಲ್ಲಿರುವ ಅನಿಲವನ್ನು ಬೇರೆ ಟ್ಯಾಂಕರ್‌ಗೆ ವರ್ಗಾಯಿಸುವುದೇ ಹೇಗೆ ಎನ್ನುವುದೇ ತಜ್ಞರ ಮುಂದೆ ಇರುವ ದೊಡ್ಡ ಸವಾಲು.

 

ಮಂಗಳೂರಿನಿಂದ ಧಾರವಾಡಕ್ಕೆ ಟ್ಯಾಂಕರ್‌ ತೆರಳುತ್ತಿತ್ತು. ಈ ಟ್ಯಾಂಕರ್‌ನಲ್ಲಿ ಸುಮಾರು 30 ಟನ್‌ ಅನಿಲವಿದೆ. ಸೋರಿಕೆ ಭೀತಿಯಿಂದ ಪರಿಸರದ ನಿವಾಸಿಗಳಿಗೆ ಬೆಂಕಿ ಒಲೆ ಮತ್ತು ವಿದ್ಯುತ್‌ ದೀಪ ಹಚ್ಚದಂತೆ ಜಿಲ್ಲಾಡಳಿತ ಸೂಚಿಸಿದೆ.

Share This Article