ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರೀ ಮಳೆಯಿಂದಾಗಿ ಕತ್ರಾದ ವೈಷ್ಣೋದೇವಿ ಯಾತ್ರಾ (Vaishno Devi Yatra) ಮಾರ್ಗದಲ್ಲಿ ಭೂಕುಸಿತ ಉಂಟಾಗಿದ್ದು, ನಾಲ್ವರು ಗಾಯಗೊಂಡಿದ್ದಾರೆ.
ತ್ರಿಕೂಟ ಬೆಟ್ಟಗಳ ಮೇಲಿರುವ ದೇಗುಲಕ್ಕೆ ಕತ್ರಾದ ಮೂಲಕ ತೆರಳಬೇಕು. ಯಾತ್ರೆಯ ಆರಂಭಿಕ ಸ್ಥಳವಾದ ಬಂಗಂಗಾ (Banganga) ಪ್ರದೇಶದ ಬಳಿ ಬೆಳಗ್ಗೆ 8 ಗಂಟೆ ಸುಮಾರಿಗೆ ಭೂಕುಸಿತ ಸಂಭವಿಸಿದೆ. ಇದನ್ನೂ ಓದಿ: 3 ವರ್ಷದ ಸಿನಿ ಪಯಣದ ಒಂದು ಝಲಕ್: ಕಾಂತಾರ ಅದ್ಭುತ ಲೋಕ
ಭಾರೀ ಮಳೆಯಿಂದಾಗಿ ಭೂ ಕುಸಿತ ಉಂಟಾಗಿದ್ದು, ಹಲವಾರು ಯಾತ್ರಿಕರು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದಾರೆ. ಯಾತ್ರಾರ್ಥಿಗಳ ರಕ್ಷಣಾ ಕಾರ್ಯಚರಣೆ ನಡೆಯುತ್ತಿದೆ.