ಚಾರ್ಮಾಡಿಯಲ್ಲಿ ಗುಡ್ಡ ಕುಸಿತ- ಪ್ರವಾಸಿಗರಿಗೆ ಆತಂಕ

Public TV
1 Min Read

ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿಯಲ್ಲಿ ಸುರಿಯುತ್ತಿರೋ ಭಾರೀ ಮಳೆಯಿಂದಾಗಿ ಮೂಡಿಗೆರೆಯಿಂದ ಧರ್ಮಸ್ಥಳ, ಮಂಗಳೂರು, ಮಣಿಪಾಲ್‍ಗೆ ಸಂಪರ್ಕ ಕಲ್ಪಿಸೋ ಚಾರ್ಮಾಡಿಯಲ್ಲಿ ಗುಡ್ಡ ಕುಸಿದಿದೆ.

ಅದೃಷ್ಟವತಾಶ್ ಘಟನೆಯಿಂದ ಯಾವುದೇ ಅನಾಹುತ ಸಂಭವಿಸಿಲ್ಲ. ಭಾನುವಾರ ಸಂಜೆ ಸುಮಾರು 5.30 ರಿಂದ 6 ಗಂಟೆಗೆ ಗುಡ್ಡ ಕುಸಿದಿದ್ದು ಪ್ರವಾಸಿಗರು ಆತಂಕಕ್ಕೀಡಾಗಿದ್ದಾರೆ. ಗುಡ್ಡ ಕುಸಿತದಿಂದಾಗಿ ಒಂದು ಗಂಟೆಗೂ ಅಧಿಕ ಕಾಲ ಸುಮಾರು ಎರಡು ಕಿ.ಮೀ.ನಷ್ಟು ದೂರ ಟ್ರಾಫಿಕ್ ಜಾಮ್ ಆಗಿತ್ತು. ಈ ಮಾರ್ಗ ಕಿರಿದಾದ ರಸ್ತೆಯಾಗಿರೋದ್ರಿಂದ ವಾಹನಗಳು ನಿಂತಲ್ಲೇ ನಿಂತಿದ್ವು. ಕೂಡಲೇ ಸ್ಥಳಕ್ಕಾಗಮಿಸಿದ ಬಣಕಲ್ ಪೊಲೀಸರು ಸಂಚಾರ ಸುಗಮಗೊಳಿಸಿದ್ದಾರೆ.

ಇಲ್ಲಿ ವರ್ಷಪೂರ್ತಿ ಮಳೆ ಸುರಿಯುತ್ತಿದ್ದು, ಸದಾ ನೀರು ಹರಿಯೋದರಿಂದ ವಾಹನಸವಾರರು ಯಾವಾಗ, ಏನಾಗುತ್ತೆ ಎಂದು ಆತಂಕದಲ್ಲಿ ಸಂಚರಿಸುತ್ತಿದ್ದಾರೆ. ರಾತ್ರಿಯಾಗುತ್ತಿದ್ದಂತೆ ಮಂಗಳೂರಿನಿಂದ ಮರಳಿನ ಲಾರಿಗಳು ಎಗ್ಗಿಲ್ಲದೇ ಸಂಚರಿಸೋದರಿಂದ ಹೀಗೆ ಆಗ್ತಿದೆ. ಮೊನ್ನೆ ಸಂಜೆಯೂ ಬೆಟ್ಟ ಕುಸಿದಿದ್ದು, ನಿನ್ನೆ ಸಂಜೆಯೂ ಕುಸಿದಿದೆ. ಕೂಡಲೇ ಸರ್ಕಾರ ಹಾಗೂ ಜಿಲ್ಲಾಡಳಿತ ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *