ಕಾರ್ ಕಿಟಕಿ ಒಡೆದು 2 ಲ್ಯಾಪ್‍ಟಾಪ್ ಕದ್ರು

Public TV
1 Min Read

ಬೆಂಗಳೂರು: ಹೋಟೆಲ್ ಬಳಿ ನಿಲ್ಲಿಸಿದ್ದ ಕಾರಿನ ಕಿಟಕಿಯ ಗಾಜು ಒಡೆದು ಲ್ಯಾಪ್‍ಟಾಪ್ ಕದ್ದೊಯ್ದಿರುವ ಘಟನೆ ಬೆಂಗಳೂರಿನ ಹೊಸಕೋಟೆಯಲ್ಲಿ ನಡೆದಿದೆ.

ಬೆಂಗಳೂರು-ಕೋಲಾರ ರಾಷ್ಟ್ರೀಯ ಹೆದ್ದಾರಿ 7 ರ ಸುಲ್ತಾನ್ ಪ್ಯಾಲೇಸ್ ಹೋಟೆಲ್ ಬಳಿ ಮನ್ಸೂರ್ ಅಲಿ ಎಂಬವರು ಊಟ ಮಾಡಲು ತಮ್ಮ ಕಾರನ್ನು ಹೋಟೆಲ್ ಹೊರಭಾಗದಲ್ಲಿ ನಿಲ್ಲಿಸಿದ್ದರು. ಈ ವೇಳೆ ಕಾರಿನ ಕಿಟಕಿಯ ಗಾಜನ್ನು ಒಡೆದು ಕಳ್ಳರು ಕಾರಿನಲ್ಲಿದ್ದ 2 ಲ್ಯಾಪ್ ಟಾಪ್ ಹಾಗೂ ನಗದು ಸೇರಿದಂತೆ ಒಂದು ಲಕ್ಷ ಬೆಲೆಬಾಳುವ ವಸ್ತುಗಳನ್ನು ಕದ್ದು ಎಸ್ಕೇಪ್ ಆಗಿದ್ದಾರೆ.

ಇನ್ನು ಮೊಬೈಲ್ ಕಂಪೆನಿಯೊಂದರಲ್ಲಿ ವ್ಯವಸ್ಥಾಪಕರಾಗಿರುವ ಮನ್ಸೂರ್ ಹೊಸಕೋಟೆ ನಗರದ ಮೊಬೈಲ್ ಸ್ಟೋರ್ ಗಳ ವೀಕ್ಷಣೆಗೆ ಆಗಮಿಸಿದ್ದು, ಈ ಸಂಬಂಧ ಹೊಸಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಪೊಲೀಸರು ಸ್ಥಳೀಯ ಸಿಸಿಟಿವಿ ದೃಶ್ಯಗಳನ್ನು ಸಂಗ್ರಹಿಸುತ್ತಿದ್ದು, ಆರೋಪಿಗಳ ಪತ್ತೆಗಾಗಿ ವಿಶೇಷ ಜಾಲ ಬೀಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *