ಸಕಲ ಸರ್ಕಾರಿ ಗೌರವದೊಂದಿಗೆ ರಸ್ತೆ ಅಪಘಾತಲ್ಲಿ ಮೃತಪಟ್ಟ ಯೋಧನ ಅಂತ್ಯಕ್ರಿಯೆ

Public TV
1 Min Read

ಚಿಕ್ಕೋಡಿ: ರಸ್ತೆ ಅಪಘಾತಲ್ಲಿ ಮೃತಪಟ್ಟ ಬಿಎಸ್‍ಎಫ್ ಯೋಧ ಸೂರಜ್ ಸುತಾರ್ ಅಂತ್ಯಕ್ರಿಯೆ ಇಂದು ಅವರ ಸ್ವಗ್ರಾಮದಲ್ಲಿ ನಡೆಯಿತು.

ಪಶ್ಚಿಮಬಂಗಾಳದ ಪಂಜಿಪರಾದ ದಿನಾಜ್‌ಪುರ್‌ನ 152ನೇ ಬಟಾಲಿಯನ್‍ನಲ್ಲಿ ಸೇವೆ ಸಲ್ಲಿಸುತ್ತಿದ್ದ ಸೂರಜ್ ಸುತಾರ್ ನಿನ್ನೆ ಪಶ್ಚಿಮಬಂಗಾಳದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮೃತರಾಗಿದ್ದರು. ಇಂದು ಅವರ ಸ್ವಗ್ರಾಮ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಡೂರುವಾಡಿ ಗ್ರಾಮದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯ ಸಂಸ್ಕಾರ ನೆರವೇರಿತು. ಇದನ್ನೂ ಓದಿ: ಚಂದ್ರಶೇಖರ ಗುರೂಜಿ ಹತ್ಯೆ ನಡೆದ ಹೋಟೆಲ್‍ನಲ್ಲಿ ಮತ್ತೆ ಪೂಜೆ

ಕಳೆದ 10 ವರ್ಷಗಳಿಂದ ಸೂರಜ್ ಭಾರತೀಯ ಸೈನ್ಯದಲ್ಲಿ ಸೇವೆ ಸಲ್ಲಿಸುತ್ತಿದ್ದರು. ನಿನ್ನೆ ತಮ್ಮ ಕುಟುಂಬವನ್ನು ಕರೆತರಲು ರೈಲ್ವೇ ನಿಲ್ದಾಣಕ್ಕೆ ತೆರಲಿ ರಸ್ತೆ ಕ್ರಾಸ್ ಮಾಡುವ ಸಂದರ್ಭ ಲಾರಿ ಡಿಕ್ಕಿಯಾಗಿ ಸೂರಜ್ ಪಶ್ಚಿಮಬಂಗಾಳದಲ್ಲಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದರು. ಈ ಸುದ್ದಿ ತಿಳಿಯುತ್ತಿದ್ದಂತೆ ಯೋಧನ ಸ್ವಗ್ರಾಮ ಯಡೂರುವಾಡಿಯಲ್ಲಿ ಸ್ಮಶಾನ ಮೌನ ಆವರಿಸಿತ್ತು. ಇಂದು ಯೋಧನ ಪಾರ್ಥಿವ ಶರೀರ ಸ್ವಗ್ರಾಮಕ್ಕೆ ಆಗಮಿಸುತ್ತಿದ್ದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಇದನ್ನೂ ಓದಿ: ನಮ್ಮ ಪ್ರಧಾನಿ ತಾಯಿ ಹೃದಯದವರು: ಶೋಭಾ ಕರಂದ್ಲಾಜೆ

ಯೋಧನ ಪಾರ್ಥಿವ ಶರೀರವನ್ನು ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು. ನಂತರ ಸಚಿವೆ ಶಶಿಕಲಾ ಜೊಲ್ಲೆ, ವಿಧಾನಪರಿಷತ್ ಮಾಜಿ ಸದಸ್ಯ ಮಹಾಂತೇಶ್ ಕವಟಗಿಮಠ, ಚಿಕ್ಕೋಡಿ ಶಾಸಕ ಗಣೇಶ್‌ ಹುಕ್ಕೇರಿ ಚಿಕ್ಕೋಡಿ ಉಪವಿಭಾಗಾಧಿಕಾರಿ ಸಂತೋಷ್ ಮೃತ ಯೋಧನ ಪಾರ್ಥಿವ ಶರೀರದ ದರ್ಶನ ಪಡೆದು ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಗ್ರಾಮದ ಸ್ಮಶಾನ ಭೂಮಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಸೂರಜ್ ಸುತಾರ್‌  ಅಂತ್ಯಸಂಸ್ಕಾರ ನೆರವೇರಿತು.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *