ಆಟದಲ್ಲಿ ಜಗಳ-ಗೆಳೆಯನನ್ನ ಕೊಡಲಿಯಿಂದ ಕೊಂದ್ರು

Public TV
1 Min Read

– ಇಬ್ಬರ ಬಂಧನ, ರಬ್ಬರ್ ತೋಟದಲ್ಲಿ ಸಮಾಧಿ

ತಿರುವನಂತಪುರ: 16 ವರ್ಷದ ಬಾಲಕನೋರ್ವ ತನ್ನ ಸಹಪಾಠಿಯನ್ನು ಕೊಲೆಗೈದಿರುವ ಘಟನೆ ಕೇರಳದ ಪತ್ತನಂತಿಟ್ಟ ಜಿಲ್ಲೆಯಲ್ಲಿ ನಡೆದಿದೆ.

ಅಂಗದಿಕ್ಕಲ್ ನಿವಾಸಿಯಾದ ಅಖಿಲ್ (16) ಸ್ನೇಹಿತರಿಂದಲೇ ಕೊಲೆಯಾದ ಬಾಲಕ. ಎಲ್‍ಐಡಿ ಆಟದಲ್ಲಿ ಸ್ನೇಹಿತರ ಮಧ್ಯೆ ಜಗಳ ನಡೆದಿದೆ. ಈ ವೇಳೆ ಅಖಿಲ್ ನನ್ನು ಆತನ ಗೆಳೆಯರೇ ಕೊಡಲಿಯಿಂದ ಕೊಂದಿದ್ದಾರೆ. ತದನಂತರ ಶವವನ್ನು ಕೊಡುಮಾನ್ ಪ್ರದೇಶದ ರಬ್ಬರ್ ತೋಟದಲ್ಲಿ ಯಾರಿಗೂ ತಿಳಿಯದಂತೆ ಸಮಾಧಿ ಮಾಡಿದ್ದಾರೆ.

ಭಾನುವಾರ ಈ ಕೊಲೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಪೊಲೀಸರು ಇಬ್ಬರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ. ಪೊಲೀಸರು ಕೊಲೆಗೆ ಬೇರೆ ಕಾರಣಗಳಿರುಬಹುದಾ ಎಂದು ಅನುಮಾನಿಸಿದ್ದು, ತನಿಖೆ ನಡೆಸುತ್ತಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *