ಚಿಕ್ಕಮಗಳೂರು: ತರೀಕೆರೆ (Tarikere) ತಾಲೂಕಿನ ಲಿಂಗದಹಳ್ಳಿ ಗ್ರಾಮದಲ್ಲಿ ಅರಣ್ಯ ಇಲಾಖೆ (Forest Department) ಇಟ್ಟಿದ್ದ ಬೋನಿಗೆ 4 ವರ್ಷದ ಹೆಣ್ಣು ಚಿರತೆ (Leopard) ಸೆರೆಯಾಗಿದೆ.
ಲಿಂಗದಹಳ್ಳಿ, ಉಡೇವಾ ಸುತ್ತಮುತ್ತ ಚಿರತೆ ಓಡಾಟ ನಡೆಸಿ ಆತಂಕ ಮೂಡಿಸಿತ್ತು. 8ಕ್ಕೂ ಹೆಚ್ಚು ನಾಯಿಗಳನ್ನು ಈ ಚಿರತೆ ಬೇಟೆಯಾಡಿತ್ತು. ಚಿರತೆ ಸಂಚಾರದಿಂದ ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದರು. ಇದನ್ನೂ ಓದಿ: ಕಾಡುಹಂದಿಗೆ ಹಾಕಿದ್ದ ಬಲೆಗೆ ಸಿಲುಕಿ ಅಸ್ವಸ್ಥ – ಒದ್ದಾಡಿ ಪ್ರಾಣ ಬಿಟ್ಟ ಚಿರತೆ!
ಜನ, ಮನೆಯಿಂದ ಹೊರಬರೋದಕ್ಕೂ ಸಹ ಹಿಂದೇಟು ಹಾಕುತ್ತಿದ್ದರು. ಕೂಡಲೇ ಚಿರತೆ ಸೆರೆ ಹಿಡಿಯುವಂತೆ ಸ್ಥಳೀಯರು ಒತ್ತಾಯಿಸಿದ್ದರು. ಆತಂಕ ಸೃಷ್ಟಿಸಿದ್ದ ಚಿರತೆ ಸೆರೆಯಿಂದ ಜನ ನಿಟ್ಟುಸಿರುಬಿಟ್ಟಿದ್ದಾರೆ. ಇದನ್ನೂ ಓದಿ: ಹಲವು ದಿನಗಳಿಂದ ಜನರ ನಿದ್ದೆಗೆಡಿಸಿದ್ದ ಚಿರತೆ ಸೆರೆ – ಗ್ರಾಮಸ್ಥರಿಗೆ ನಿಶ್ಚಿಂತೆ

