ಕುಂದಾನಗರಿಯಲ್ಲಿ ಮೂರು ಚಿರತೆ ಪ್ರತ್ಯಕ್ಷ – ಚಿರತೆ ಸೆರೆಗೆ ಅರಣ್ಯ ಸಿಬ್ಬಂದಿ ಹರಸಾಹಸ, ಡ್ರೋನ್ ಕ್ಯಾಮೆರಾ ಬಳಕೆ

Public TV
2 Min Read

ಬೆಳಗಾವಿ: ಕುಂದಾನಗರಿ ಬೆಳಗಾವಿ ಜಿಲ್ಲೆಯಲ್ಲಿ ಒಂದಲ್ಲ, ಎರಡಲ್ಲ ಮೂರು ಚಿರತೆಗಳು ಪ್ರತ್ಯಕ್ಷವಾಗಿದ್ದು ಜಿಲ್ಲೆಯ ಮೂರು ದಿಕ್ಕುಗಳಲ್ಲಿ ಮೂರು ಚಿರತೆಗಳು ಪ್ರತ್ಯಕ್ಷವಾಗಿವೆ.

ಚಿರತೆ ಪ್ರತ್ಯಕ್ಷವಾದ ಸುತ್ತಮುತ್ತಲಿನ ಪ್ರದೇಶಗಳಲ್ಲಿನ 52 ಶಾಲೆಗಳಿಗೆ ಜಿಲ್ಲಾಡಳಿತ ಇಂದು ರಜೆ ಘೋಷಣೆ ಮಾಡಿತ್ತು. ಇತ್ತ ಚಿರತೆ ಪತ್ತೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಡ್ರೋನ್ ಕ್ಯಾಮೆರಾ ಬಳಸಿ ಸೆರೆಗೆ ಮುಂದಾಗಿದ್ದರೂ ಪ್ರಯೋಜನವಾಗುತ್ತಿಲ್ಲ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿ ಯಡೂರವಾಡಿ, ಮೂಡಲಗಿ ತಾಲೂಕಿನ ಧರ್ಮಟ್ಟಿ ಗ್ರಾಮದ ಕಬ್ಬಿನ ಗದ್ದೆ ಹಾಗೂ ಬೆಳಗಾವಿ ಜಾಧವ್ ಮಗರ, ಗಾಲ್ಫ್ ಮೈದಾನದಲ್ಲಿ ಚಿರತೆ ಪ್ರತ್ಯಕ್ಷವಾಗಿದೆ. ಇದನ್ನೂ ಓದಿ: 2023ಕ್ಕೆ ಜಾನ್ಸನ್ ಆ್ಯಂಡ್ ಜಾನ್ಸನ್ ಬೇಬಿ ಪೌಡರ್ ಮಾರಾಟ ಬಂದ್

ಕಳೆದ ಹಲವು ದಿನಗಳಿಂದ ಚಿರತೆ ನಗರದಲ್ಲಿ ಇದ್ದರೂ ಅರಣ್ಯ ಇಲಾಖೆ ಸಿಬ್ಬಂದಿ ಚಿರತೆ ಹಿಡಿಯುವಲ್ಲಿ ವಿಫಲವಾಗಿದ್ದಾರೆ. ಅರಣ್ಯ ಇಲಾಖೆ ಸಿಬ್ಬಂದಿಗೆ ಚಿರತೆ ಸೆರೆ ಹಿಡಿಯುವುದೇ ಒಂದು ದೊಡ್ಡ ಸವಾಲಾಗಿದೆ. ಅರಣ್ಯ ಇಲಾಖೆ ಸಿಬ್ಬಂದಿ ಶೋಧ ಕಾರ್ಯದಲ್ಲಿ 16 ಟ್ರ್ಯಾಪ್ ಕ್ಯಾಮೆರಾ, ಎಂಟು ಬೋನುಗಳನ್ನು ಇರಿಸಿ ಶೋಧ ಕಾರ್ಯ ನಡೆಸಲಾಗುತ್ತಿದೆ. ಆದರೂ ಚಿರತೆ ಸೆರೆ ಸಿಕ್ಕಿಲ್ಲ. ಚಿರತೆ ಸೆರೆ ಸಿಗದ ಹಿನ್ನೆಲೆ ಬೆಳಗಾವಿ ನಗರದ ಗಾಲ್ಫ್ ಮೈದಾನದ ಒಂದು ಕಿಲೋಮೀಟರ್ ವ್ಯಾಪ್ತಿಯ 22 ಸರ್ಕಾರಿ, ಖಾಸಗಿ ಶಾಲೆಗಳು ಹಾಗೂ ಮೂಡಲಗಿ ತಾಲೂಕಿನ ಧರ್ಮಟ್ಟಿ ಗ್ರಾಮದ ಸುತ್ತಮುತ್ತಲಿನ 30 ಶಾಲೆಗೆ ರಜೆ ನೀಡಲಾಗಿದೆ. ಸದ್ಯ ಚಿರತೆ ಸೆರೆಹಿಡಿಯಲು 8ನೇ ದಿನವೂ ಕಾರ್ಯಾಚರಣೆ ಮುಂದುವರಿದಿದ್ದು ಇಂದು ಚಿರತೆ ಪತ್ತೆಗಾಗಿ ಮೂರು ಡ್ರೋನ್ ಕ್ಯಾಮೆರಾ ಮತ್ತು ಮೂವ್ಮೆಂಟ್ ಕ್ಯಾಮೆರಾಗಳನ್ನು ಸಹ ಗಾಲ್ಫ್ ಮೈದಾನದಲ್ಲಿ ಫಿಕ್ಸ್ ಮಾಡಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ. ಇದನ್ನೂ ಓದಿ: ರಾಕೇಶ್ ಮೇಲೆ ನನಗೆ ಫೀಲಿಂಗ್ಸ್ ಇದೆ ಎಂದು ಬಹಿರಂಗವಾಗಿ ಹೇಳಿಕೊಂಡ ಸೋನು ಗೌಡ

ಗೋಕಾಕ್ ಹಾಗೂ ಬೆಳಗಾವಿ ವಲಯದ ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಪತ್ತೆಗಾಗಿ ಶೋಧ ಕಾರ್ಯಾಚರಣೆ ಮುಂದುವರಿಸಿದ್ದಾರೆ. ಅಷ್ಟೇ ಅಲ್ಲದೇ ಗದಗ, ದಾಂಡೇಲಿ, ಭೀಮಗಡ ಅರಣ್ಯ ವಲಯದಿಂದ ತಜ್ಞ ಸಿಬ್ಬಂದಿ ಆಗಮಿಸಿ ಶೋಧ ಕಾರ್ಯಾಚರಣೆ ನಡೆಸಿದ್ದರೂ ಚಿರತೆ ಪತ್ತೆಯಾಗದೇ ಇರುವುದು ಅರಣ್ಯ ಇಲಾಖೆ ಸಿಬ್ಬಂದಿ ನಿದ್ದೆಗೆಡಿಸಿದೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *