ಚಿರತೆ ಸೆರೆಹಿಡಿದು ಬೈಕ್‍ನಲ್ಲಿ ಕಟ್ಟಿಕೊಂಡು ಹೋಗಿ ಅರಣ್ಯ ಇಲಾಖೆಗೆ ಒಪ್ಪಿಸಿದ!

By
1 Min Read

ಹಾಸನ: ಯುವಕನೊಬ್ಬ ಚಿರತೆಯನ್ನೇ (Leopard) ಸೆರೆ ಹಿಡಿದು ಅರಣ್ಯ ಇಲಾಖೆಗೆ ಒಪ್ಪಿಸಿದ ಘಟನೆಯೊಂದು ಹಾಸನದಲ್ಲಿ (Hassan) ನಡೆದಿದೆ.

ವೇಣುಗೋಪಾಲ್ ಅಲಿಯಾಸ್ ಮುತ್ತು ಚಿರತೆ ಹಿಡಿದ ಯುವಕ. ಈತ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಗಂಡಸಿ ಹೋಬಳಿ ಬಾಗಿವಾಳು ಗ್ರಾಮದಲ್ಲಿ ಚಿರತೆ ಸೆರೆ ಹಿಡಿದು ತನ್ನ ಬೈಕ್‍ನಲ್ಲಿ ಕಟ್ಟಿಕೊಂಡು ಓಡಾಡಿದ್ದಾನೆ.

ಮುತ್ತು ಎಂದಿನಂತೆ ಬೆಳಗ್ಗೆ ತಮ್ಮ ಜಮೀನಿಗೆ ಹೋಗಿದ್ದ ವೇಳೆ ಚಿರತೆ ಕಾಣಿಸಿಕೊಂಡಿದೆ. ಈ ವೇಳೆ ಆತ ಹರಸಾಹಸಪಟ್ಟು ಚಿರತೆ ಸೆರೆ ಹಿಡಿದಿದ್ದಾನೆ. ಬಳಿಕ ಬೈಕ್ ನಲ್ಲಿ ಕಟ್ಟಿಕೊಂಡು ಅರಣ್ಯ ಇಲಾಖೆಗೆ ಒಪ್ಪಿಸಿದ್ದಾನೆ. ಎರೆ ಹಿಡಿದ ವೇಳೆ ಮುತ್ತು ಕೈಗೆ ತರಚಿದ ಗಾಯಗಳಾಗಿವೆ. ಇದನ್ನೂ ಓದಿ: ಮೂರೇ ದಿನದ ಅಂತರದಲ್ಲಿ ಮತ್ತೊಂದು ಚೀತಾ ಸಾವು – 4 ತಿಂಗಳಲ್ಲಿ 8ನೇ ಘಟನೆ

ಸದ್ಯ ಚಿರತೆಗೆ ಗಂಡಸಿ ಪಶು ವೈದ್ಯಕೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಗಂಡಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ:ಚಲಿಸುತ್ತಿದ್ದ ಕಾರಿನಲ್ಲೇ ಪತಿಯೊಂದಿಗೆ ಜಗಳವಾಡುತ್ತಾ ಸ್ಟೇರಿಂಗ್ ಎಳೆದ ಪತ್ನಿ!

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್