ಸೌಜನ್ಯಾ ಕೇಸ್ ಮರು ತನಿಖೆಯಾಗ್ಲಿ- ಧರ್ಮಸ್ಥಳದ ಗೌರವ, ಪ್ರತಿಷ್ಠೆಯನ್ನ ಹೇಗಾದ್ರೂ ಕಾಪಾಡ್ತೇವೆ: VHP

By
1 Min Read

ಮಂಗಳೂರು: ಸೌಜನ್ಯಾ (Sowjanya Case) ಅತ್ಯಾಚಾರ ಹಾಗೂ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ವಿಶ್ವ ಹಿಂದೂ ಪರಿಷತ್ ಧ್ವನಿ ಎತ್ತಿದ್ದು, ಸೌಜನ್ಯಾ ಸಾವಿಗೆ ನ್ಯಾಯ ಸಿಗಬೇಕು ಜೊತೆಗೆ ಧರ್ಮಸ್ಥಳ ಕ್ಷೇತ್ರದ ಗೌರವ, ಪ್ರತಿಷ್ಠೆಯನ್ನು ಯಾವ ಬೆಲೆ ಕೊಟ್ಟಾದರೂ ಕಾಪಾಡುತ್ತೆ ಎಂದಿದೆ.

ವಿಶ್ವ ಹಿಂದೂ ಪರಿಷತ್ ನ ಹಿರಿಯ ಮುಖಂಡ ಎಂ.ಬಿ.ಪುರಾಣಿಕ್ (MB Puranik) ಬೆಳ್ತಂಗಡಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು. ಸೌಜನ್ಯಾ ಪ್ರಕರಣ ಇತ್ಯರ್ಥ ಆಗದೇ ಇರೋದು ವ್ಯವಸ್ಥೆಗೆ ಕಪ್ಪುಚುಕ್ಕೆ. ಹೀಗಾಗಿ ಮರು ತನಿಖೆ ನಡೆಸಬೇಕೆನ್ನುವುದು ವಿಎಚ್‍ಪಿಯ ಆಗ್ರಹವಾಗಿದೆ. ಹಾಲಿ ನ್ಯಾಯಾಧೀಶರ ಮೂಲಕ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸುತ್ತೇವೆ ಎಂದರು.

ಯಾವ ರೀತಿ ತನಿಖೆಯಾಗಬೇಕೆಂಬುದು ವ್ಯವಸ್ಥೆಗೆ ಬಿಟ್ಟ ವಿಚಾರ. ಆದರೆ ನಿಜವಾದ ಆರೋಪಿ ಯಾರೆಂದು ಗೊತ್ತಾಗಬೇಕು. ಆರೋಪಿಗೆ ಶಿಕ್ಷೆಯಾಗುವವರೆಗೂ ಈ ಪ್ರಕರಣ ಅಂತ್ಯ ಆಗೋದಿಲ್ಲ. ಸೌಜನ್ಯಾಳಿಗೆ ನ್ಯಾಯ ಸಿಗಬೇಕೆಂದು ಕರಾವಳಿಯ ಎಲ್ಲಾ ದೇವಸ್ಥಾನ ಹಾಗೂ ದೈವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಸಲಿದ್ದೇವೆ ಎಂದಿದ್ದಾರೆ. ಜೊತೆಗೆ ಯಾವುದೇ ಕ್ಷೇತ್ರಕ್ಕೆ, ಧರ್ಮಕ್ಕೆ ಅಪಚಾರ ಆದಾಗ ವಿಶ್ವ ಹಿಂದೂ ಪರಿಷತ್ ವಿರೋಧವನ್ನ ಸೂಚಿಸಿದೆ. ಅದೇ ರೀತಿ ಧರ್ಮಸ್ಥಳದಂತಹ ಪುಣ್ಯ ಕ್ಷೇತ್ರಕ್ಕೆ ಅಪಚಾರ ಅವಮಾನವಾಗುವುದನ್ನ ನಾವೂ ಸಹಿಸೋದಿಲ್ಲ ಎಂದು ಹೇಳಿದರು.

ಕ್ಷೇತ್ರಕ್ಕೆ ಮುತ್ತಿಗೆ ಹಾಕುವುದನ್ನು ನಾವು ಸಹಿಸುವುದಿಲ್ಲ. ಮಾತ್ರವಲ್ಲ ಸೌಜನ್ಯಾ ಪ್ರಕರಣ ಹಾಗೂ ಧರ್ಮಸ್ಥಳ (Dharmasthala) ಕ್ಷೇತ್ರಕ್ಕೂ ತಾಳೆ ಹಾಕುವುದನ್ನ ನಾವೂ ಸಹಿಸೋದಿಲ್ಲ. ಧರ್ಮಸ್ಥಳ ಕ್ಷೇತ್ರ ಇವತ್ತು ನಿನ್ನೆಯದಲ್ಲ, ಕ್ಷೇತ್ರಕ್ಕೆ ಅದರದ್ದೇ ಆದ ಇತಿಹಾಸ ಇದೆ ಎಂದ ಅವರು ಧರ್ಮಸ್ಥಳ ಕ್ಷೇತ್ರದ ಗೌರವವನ್ನ ಪ್ರತಿಷ್ಠೆಯನ್ನ ಯಾವ ಬೆಲೆ ಕೊಟ್ಟಾದರೂ ವಿಶ್ವ ಹಿಂದೂ ಪರಿಷತ್ ಕಾಪಾಡುತ್ತದೆ.

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್