ಮಾತಾಡೋರು ಮಾತಾಡಲಿ, ಸೂಕ್ತ ವೇದಿಕೆಯಲ್ಲಿ ನಾನು ಮಾತಾಡ್ತೀನಿ: ಬಾನು ಮುಷ್ತಾಕ್

Public TV
1 Min Read

ಬೆಂಗಳೂರು: ಮಾತನಾಡುವವರು ಮಾತಾಡಲಿ, ಸೂಕ್ತ ವೇದಿಕೆಯಲ್ಲಿ ನಾನು ಈ ಬಗ್ಗೆ ಮಾತನಾಡುತ್ತೇನೆ ಎಂದು ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು ಮುಷ್ತಾಕ್ (Banu Mushataq) ಹೇಳಿದ್ದಾರೆ.

`ಪಬ್ಲಿಕ್ ಟಿವಿ’ (PUBLiC TV) ಜೊತೆ ಮೈಸೂರು ದಸರಾ (Mysuru Dasara) ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ವಿರೋಧ ವಿಚಾರವಾಗಿ ಮಾತನಾಡಿದ ಅವರು, ಯಾರು ಏನು ಮಾತಾಡುತ್ತಾರೋ ಮಾತಾಡಲಿ. ನಾನು ಸೂಕ್ತ ಸಮಯದಲ್ಲಿ ಮಾತಾಡುತ್ತೇನೆ. ಈ ಹಿಂದೆ ನಾನು ಏನು ಮಾತಾಡಿದ್ದೇನೆ ಎಂದು ಸರಿಯಾಗಿ ತಿಳಿಕೊಂಡು ಮಾತಾಡಲಿ. ಯಾರೋ ವಿರೋಧ ಮಾಡಿದ್ರೆ ನಾನು ಉತ್ತರ ಕೊಡಬೇಕಾ? ಇದರ ಬಗ್ಗೆ ನಾನು ವಿವರವಾಗಿ ಮಾತಾಡ್ತೀನಿ ಎಂದಿದ್ದಾರೆ.ಇದನ್ನೂ ಓದಿ: ಈ ಬಾರಿ ಗಣೇಶೋತ್ಸವದಲ್ಲಿ ರಾರಾಜಿಸಲಿದೆ ಧರ್ಮಸ್ಥಳ

ಸದ್ಯ ವಿರೋಧ ಮಾಡುವ ಬಗ್ಗೆ ನಾನು ಪ್ರತಿಕ್ರಿಯೆ ಕೊಡುವುದಿಲ್ಲ. ವಿರೋಧ ಮಾಡುವವರು ಮಾಡಲಿ ಅದು ಅವರ ಸ್ವಾತಂತ್ರ‍್ಯ. ನಾನು ಅದಕ್ಕೆ ಪ್ರತಿಕ್ರಿಯೆ ಕೊಡಲ್ಲ. ನಾನು ಸೂಕ್ತವಾದ ವೇದಿಕೆಯಲ್ಲಿ ಸಕ್ಷಮವಾಗಿ ಮಾತಾಡ್ತೀನಿ ಎಂದು ತಿಳಿಸಿದ್ದಾರೆ.

2025ರ ಮೈಸೂರು ದಸರಾವನ್ನು ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು ಮುಷ್ತಾಕ್ ಉದ್ಘಾಟಿಸುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಅವರು ಘೋಷಿಸಿದ್ದರು. ಅದಾದ ಬಳಿಕ ಮಾಜಿ ಸಂಸದ ಪ್ರತಾಪ ಸಿಂಹ ಹಾಗೂ ಶಾಸಕ ಯತ್ನಾಳ್ ವಿರೋಧಿಸಿದ್ದರು.ಇದನ್ನೂ ಓದಿ: AI ವೀಡಿಯೋಗೆ ಸಾಕ್ಷಿ ಕೊಡಲು ತಡಬಡಿಸಿದ ಬುರುಡೆ ಸಮೀರ್

Share This Article