ಕೋಲಾರ: ಮನೆಯೊಂದಕ್ಕೆ ನುಗ್ಗಿ ಕಳ್ಳರು ತಮ್ಮ ಕೈಚಳಕವನ್ನು ತೋರಿಸಿರುವ ಘಟನೆ ಕೋಲಾರದ ಮುನೇಶ್ವರ ನಗರದಲ್ಲಿ ನಡೆದಿದೆ.
ಹಿರಿಯ ಪತ್ರಕರ್ತ ವಾಸುದೇವಹೊಳ್ಳ ಎಂಬವರ ಮನೆಯಲ್ಲಿ ಯಾರು ಇಲ್ಲದ ವೇಳೆ ಕಳ್ಳರು ನುಗ್ಗಿದ್ದಾರೆ. ಮನೆಯ ಬಾಗಿಲನ್ನು ಒಡೆದು ಒಳಗೋಗಿ ಪತ್ರಕರ್ತರ ಬಳಿ ಇದ್ದ ಲೈಸನ್ಸ್ ಪಿಸ್ತೂಲ್ ಮತ್ತು 20 ಸಾವಿರ ರೂಪಾಯಿ ನಗದು ಹಣವನ್ನು ದೋಚಿದ್ದಾರೆ.
ಸ್ಥಳಕ್ಕೆ ಕೋಲಾರ ನಗರದ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ಈ ಘಟನೆ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದಾರೆ.