ಲಿಂಗಾಯತ ಜಾತಿಯನ್ನು ಸ್ವತಂತ್ರ ಧರ್ಮ ಮಾಡಲು ಆಗ್ರಹಿಸಿ ಬೀದರ್‍ನಲ್ಲಿ ಬೃಹತ್ ಮೆರವಣಿಗೆ

Public TV
1 Min Read

ಬೀದರ್: ಲಿಂಗಾಯತ ಧರ್ಮಕ್ಕೆ ಸಾಂವಿಧಾನಿಕ ಮಾನ್ಯತೆ ನೀಡುವಂತೆ ಆಗ್ರಹಿಸಿ ಬೀದರ್ ನಲ್ಲಿ ಲಿಂಗಾಯತ ಧರ್ಮ ಸಮನ್ವಯ ಸಮಿತಿಯಿಂದ ಬುಧವಾರ ಬೃಹತ್ ಮೆರವಣಿಗೆ ನಡೆಯಿತು. ಸರ್ಕಾರದ ಮೇಲೆ ಒತ್ತಡ ಹೇರಲು ನಡೆದ ಈ ಮೆರವಣಿಗೆಯಲ್ಲಿ ಲಿಂಗಾಯತ ಸಮುದಾಯ ಭಾಗವಹಿಸುವ ಮೂಲಕ ಹೋರಾಟಕ್ಕೆ ಸಾಕ್ಷಿಯಾದರು.

ಭಾರಿ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದ ಲಿಂಗಾಯತ ಸಮುದಾಯ ತಮ್ಮ ಒಗ್ಗಟ್ಟಿನ ಬಲ ಪ್ರದರ್ಶನ ಮಾಡಿದರು. ಗುರುವಾರದಂದು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದ ಲಿಂಗಾಯತ ಸಮುದಾಯ ನೇಹರು ಕ್ರೀಡಾಂಗಣದಿಂದ ವಿವಿಧ ವೃತ್ತಗಳ ಮೂಲಕ ಮೌನ ಮೆರವಣಿಗೆ ಮಾಡಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ರು. ಲಿಂಗಾಯತ ಜಾತಿಯನ್ನು ಸ್ವತಂತ್ರ ಧರ್ಮ ಮಾಡಬೇಕು ಎಂದು ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರಕ್ಕೆ ಒತ್ತಾಯ ಮಾಡಿ ಬಸವಣ್ಣ ಕರ್ಮಭೂಮಿಯಿಂದ ಎಚ್ಚರಿಕೆ ನೀಡಿದ್ರು.

ಇಂದು ಕೂಡಾ ಎಲ್ಲಾ ಲಿಂಗಾಯತ ಸಮನ್ವಯ ಸಮಿತಿ ಸದಸ್ಯರು ಒಂದೆಡೆ ಸೇರಿ ಚರ್ಚೆ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಬೆಳಗಾವಿ, ಲಾತೂರ್, ಬೆಂಗಳೂರು, ದೆಹಲಿಯಲ್ಲಿ ಸಮಾವೇಶಗಳನ್ನು ಮಾಡಲಿದ್ದಾರೆ ಎನ್ನಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *