ಹಾಡುಹಗಲೇ ನಡುರಸ್ತೆಯಲ್ಲಿ ಯುವಕನ ಮೇಲೆ ದಾಳಿ – ಬೆಚ್ಚಿಬಿದ್ದ ಸವಾರರು

Public TV
1 Min Read

ಕೊಪ್ಪಳ: ಇಸ್ಪೀಟ್ (Playing Cards) ಆಟ ಆಡಿಸುವ ಗುಂಪುಗಳ ನಡುವೆ ಮತ್ತೆ ಮಾರಾಮಾರಿ ನಡೆದ ಘಟನೆ ಕೊಪ್ಪಳದಲ್ಲಿ ನಡೆದಿದೆ.

ಕೊಪ್ಪಳ (Koppala) ಜಿಲ್ಲೆಯ ಗಂಗಾವತಿ (Gangavathi) ನಗರದ ಸಿಂಧನೂರು ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಹಾಡುಹಗಲೇ ನಡುರಸ್ತೆಯಲ್ಲಿ ಯುವಕನ ಮೇಲೆ ಗುಂಪೊಂದು ದಾಳಿ ಮಾಡಿ, ತಲೆಮೇಲೆ ಕಲ್ಲು ಎತ್ತಿಹಾಕಿ ಕೊಲೆಗೆ ಯತ್ನಿಸಿದ್ದಾರೆ. ಗಂಗಾವತಿಯ ಅಮರಭಗತ್ ಸಿಂಗ್ ನಗರದ ಮಾರುತಿ ಕೊಲೆ ಯತ್ನಕ್ಕೆ ಒಳಗಾದ ಯುವಕ. ಆತನ ಸ್ಥಿತಿ ಚಿಂತಾಜನಕವಾಗಿದ್ದು, ಹುಬ್ಬಳ್ಳಿಯ (Hubballi) ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ಇಂದು ಕಿತ್ತೂರು ಕರ್ನಾಟಕ ಬೆಳಗಾವಿಯಲ್ಲಿ ರಾಹುಲ್ ಗಾಂಧಿ ಹವಾ

crime

ಭಾನುವಾರ ಸಂಜೆ ಐದು ಗಂಟೆಗೆ ಸುಮಾರು 10ಕ್ಕೂ ಹೆಚ್ಚು ಯುವಕರ ಗುಂಪೊಂದು ಸ್ಕೂಟಿ ಮೇಲೆ ಹೊರಟಿದ್ದ ಯುವಕನನ್ನು ತಡೆದು ಹಲ್ಲೆ ಮಾಡಿದ್ದಾರೆ. ಹಲ್ಲೆ ನಂತರ ಯುವಕ ರಸ್ತೆ ಮೇಲೆ ಬಿದ್ದಿದ್ದ. ಆದರೂ ಬಿಡದ ಆರೋಪಿಗಳು ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆಗೆ ಯತ್ನಿಸಿದ್ದಾರೆ. ಬಸ್, ಕಾರು ಮತ್ತು ಬೈಕ್ ಮೇಲಿದ್ದ ಜನ ಘಟನೆಯನ್ನು ಮೂಕ ಪ್ರೇಕ್ಷಕರಂತೆ ನೋಡಿಕೊಂಡು ನಿಂತಿದ್ದರು. ಈ ಭಯಾನಕ ದೃಶ್ಯ ಕಂಡು ಜನ ಬೆಚ್ಚಿಬಿದ್ದಿದ್ದಾರೆ. ತಲೆ ಮೇಲೆ ಕಲ್ಲು ಎತ್ತಿ ಹಾಕುವ ದೃಶ್ಯ ಮೊಬೈಲ್‌ನಲ್ಲಿ ಸೆರೆಯಾಗಿದೆ. ಇದನ್ನೂ ಓದಿ: ಆಡಿಯೋದಲ್ಲಿ ಶಿವಲಿಂಗೇಗೌಡ ಹೇಳಿರುವುದು ಸುಳ್ಳು ಎಂದು ಧರ್ಮಸ್ಥಳಕ್ಕೆ ಬಂದು ಪ್ರಮಾಣ ಮಾಡಲಿ – ರೇವಣ್ಣ ಸವಾಲು

ಇಂತಹ ಪ್ರಕರಣಗಳು ಗಂಗಾವತಿಯಲ್ಲಿ ಸರ್ವೇ ಸಾಮಾನ್ಯವಾಗಿದೆ. ಕಳೆದ ತಿಂಗಳು ಹೋಳಿ ಹುಣ್ಣಿಮೆ ದಿನದಂದು ಎಪಿಎಂಸಿ ಗಂಜದಲ್ಲಿ ಇದೇ ಗುಂಪುಗಳ ನಡುವೆ ಗಲಾಟೆ ನಡೆದಿತ್ತು. ಈ ರೀತಿಯಾದ ಘಟನೆಗಳನ್ನು ನಿಯಂತ್ರಿಸುವಲ್ಲಿ ಪೊಲೀಸ್ ಇಲಾಖೆ ಸಂಪೂರ್ಣ ವಿಫಲವಾಗಿದೆ. ಗಲಾಟೆ ನಡೆದು ಸಾಕಷ್ಟು ಬಾರಿ ಯುವಕರು ಗಂಭೀರ ಗಾಯಗೊಂಡಿದ್ದರೂ ಪ್ರಕರಣ ಮಾತ್ರ ದಾಖಲಾಗಿರಲಿಲ್ಲ. ಸದ್ಯ ನಡೆದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಗಂಗಾವತಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ. ಇದನ್ನೂ ಓದಿ: ರಾಹುಲ್ ಗಾಂಧಿ ಮೋದಿಯ ಅತಿದೊಡ್ಡ TRP: ಮಮತಾ ಬ್ಯಾನರ್ಜಿ

Share This Article
Leave a Comment

Leave a Reply

Your email address will not be published. Required fields are marked *