ರೈತರ ಸಾಲಮನ್ನಾ ಈಗ ಫ್ಯಾಶನ್ ಆಗಿದೆ: ವೆಂಕಯ್ಯ ನಾಯ್ಡು

Public TV
1 Min Read

ಮುಂಬೈ: ರೈತರ ಸಾಲಮನ್ನಾ ಮಾಡುವುದು ಈಗ ಫ್ಯಾಶನ್ ಆಗಿದೆ ಎಂದು ಕೇಂದ್ರ ನಗರಾಭಿವೃದ್ಧಿ ಸಚಿವ ವೆಂಕಯ್ಯ ನಾಯ್ಡು ಹೇಳಿದ್ದಾರೆ.

ಮುಂಬೈಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ತೀವ್ರ ಸಂದರ್ಭದಲ್ಲಿ ಸಾಲವನ್ನು ಮನ್ನಾ ಮಾಡಬೇಕು. ಆದರೆ ಇದೇ ಅಂತಿಮ ಪರಿಹಾರವಾಗಬಾರದು. ಸರ್ಕಾರಗಳು ರೈತರ ರಕ್ಷಣೆಗೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಏರ್ ಇಂಡಿಯಾದ ಉದಾಹರಣೆ ನೀಡಿದ ಅವರು, ಏರ್‍ಇಂಡಿಯಾದಲ್ಲಿ ಏನಾಯ್ತು? ಸರ್ಕಾರವು ಈ ವ್ಯವಹಾರದಲ್ಲಿ ಯಾವುದೇ ವ್ಯವಹಾರವನ್ನು ಹೊಂದಿಲ್ಲ. ಕೇಂದ್ರ ಸರ್ಕಾರ ಹೆಲ್ತ್ ಕೇರ್, ಆಡಳಿತ, ಶಿಕ್ಷಣ ಮತ್ತು ಮೂಲ ಸೌಲಭ್ಯಗಳ ಕ್ಷೇತ್ರಗಳಿಗೆ ಹೆಚ್ಚು ಗಮನಕೊಡಬೇಕಿದೆ ಎಂದು ಈ ಸಂದರ್ಭದಲ್ಲಿ ಹೇಳಿದರು.

ರೈತರಿಗೆ ಅವಮಾನ: ವೆಂಕಯ್ಯ ನಾಯ್ಡು ಹೇಳಿಕೆಗೆ ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತರಾಮ್ ಯಚೂರಿ ಪ್ರತಿಕ್ರಿಯಿಸಿ, ಕಳೆದ ಮೂರು ವರ್ಷಗಳಲ್ಲಿ ಭಾರತದಲ್ಲಿ 36 ರಿಂದ 40 ಸಾವಿರ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ನಡುವೆ ಸಾಲಮನ್ನಾ ಮಾಡುವುದನ್ನು ಫ್ಯಾಶನ್ ಎಂದು ಹೇಳುವ ಮೂಲಕ ಅನ್ನದಾತನಿಗೆ ಅವಮಾನ ಮಾಡಿದ್ದಾರೆ ಎಂದು ಟೀಕಿಸಿದ್ದಾರೆ.

ಉತ್ತರಪ್ರದೇಶ, ಮಹಾರಾಷ್ಟ್ರ, ಪಂಜಾಬ್ ಸರ್ಕಾರಗಳು ರೈತರ ಸಾಲವನ್ನು ಮನ್ನಾ ಮಾಡಿದ ಬಳಿಕ ಬುಧವಾರ ಕರ್ನಾಟಕ ಸಿಎಂ ಸಿದ್ದರಾಮಯ್ಯ ಸಹಕಾರಿ ಸಂಘಗಳಲ್ಲಿ ರೈತರು ಮಾಡಿದ 50 ಸಾವಿರ ರೂ.ವರೆಗಿನ ಸಾಲವನ್ನು ಮಾಡಲಾಗುವುದು ಎಂದು ತಿಳಿಸಿದ್ದಾರೆ.

 

ಇದನ್ನೂ ಓದಿ: ಸಾಲ ಮನ್ನಾ ಮಾಡಿದ ನಂತ್ರ ಮೋದಿಗೆ ಸಿಎಂ ಸವಾಲ್ ಹಾಕಿದ್ದು ಹೀಗೆ

ಇದನ್ನೂ ಓದಿ:ಯಾವ ರಾಜ್ಯದಲ್ಲಿ ಎಷ್ಟು ಸಾಲಮನ್ನಾ? ಕೇಂದ್ರ ಸರ್ಕಾರ ಮತ್ತು ಆರ್‍ಬಿಐ ಹೇಳಿದ್ದು ಏನು?

 

 

Share This Article
Leave a Comment

Leave a Reply

Your email address will not be published. Required fields are marked *