ರಸ್ತೆಯಲ್ಲಿ ಬಿದ್ದು ಒದ್ದಾಡಿದ ಯುವಕನಿಗೆ ನೀರು ಕುಡಿಸಿ ಆಸ್ಪತ್ರೆಗೆ ದಾಖಲಿಸಿದ ಸ್ಥಳೀಯರು

Public TV
1 Min Read

ಹಾವೇರಿ: ಬೈಕಿಗೆ ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ರಸ್ತೆಯಲ್ಲಿ ಬಿದ್ದು ಒದ್ದಾಡಿದ ಯುವಕನಿಗೆ ನೀರು ಕುಡಿಸಿ ಸ್ಥಳೀಯರು ಆಸ್ಪತ್ರೆ ದಾಖಲಿಸಿ ಮಾನವೀಯತೆ ಮೆರೆದ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ.

ಹಾವೇರಿ ಜಿಲ್ಲೆ ಹಾನಗಲ್ ಪಟ್ಟಣದ ಹೊರವಲಯದಲ್ಲಿ ಇರುವ ಬೆಳಗಾಲಪೇಟೆ ಕ್ರಾಸ್ ನಲ್ಲಿ ಬಸ್ ಡಿಕ್ಕಿ ಹೊಡೆದಿದ್ದರಿಂದ ಬೈಕ್‍ನಲ್ಲಿದ್ದ 23 ವರ್ಷದ ಅರುಣ ಭಾವಿಮನಿ ಸ್ಥಳದಲ್ಲೇ ಸಾವನ್ನಪ್ಪಿದ್ದರು. ಘಟನೆಯಲ್ಲಿ 25 ವರ್ಷದ ದೊಡ್ಡಕುರುಬರ ಗಂಭೀರವಾಗಿ ಗಾಯಗೊಂಡು ರಸ್ತೆಯಲ್ಲೇ ಬಿದ್ದು ಹೊರಳಾಡುತ್ತಿದ್ದರು. ಯುವಕನ ಸ್ಥಿತಿಯನ್ನು ನೋಡಿದ ಸ್ಥಳೀಯರು ನೀರು ಕುಡಿಸಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತದೆ.

                         ಅರುಣ ಭಾವಿಮನಿ

 

ತಮ್ಮ ಗ್ರಾಮದಿಂದ ಬೆಳಗಾಲಪೇಟಿ ಗ್ರಾಮದಿಂದ ಹಾನಗಲ್ ಗ್ರಾಮಕ್ಕೆ ಹೋಗುತ್ತಿರುವ ವೇಳೆ ಈ ದುರ್ಘಟನೆ ಸಂಭವಿಸಿದೆ. ಈ ವಿಷಯ ತಿಳಿಯುತ್ತಿದ್ದಂತೆ ಹಾನಗಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಬಗ್ಗೆ ಹಾನಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *