ಲೋಕಸಭಾ, ವಿಧಾನಸಭಾ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಹೆಸರು ಫೈನಲ್

Public TV
1 Min Read

ಬೆಂಗಳೂರು: ಎರಡು ಲೋಕಸಭಾ ಮತ್ತು 1 ವಿಧಾನಸಭಾ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಅಂತಿಮವಾಗಿದೆ.

ಶಿವಮೊಗ್ಗ ಲೋಕಸಭೆ ಉಪಚುನಾವಣೆಗೆ ಬಿ.ವೈ. ರಾಘವೇಂದ್ರ, ಬಳ್ಳಾರಿಗೆ ಜೆ.ಶಾಂತ ಹೆಸರು ಅಂತಿಮವಾಗಿದೆ. ಜಮಖಂಡಿ ವಿಧಾನಸಭೆ ಬೈ ಎಲೆಕ್ಷನ್‍ಗೆ ಶ್ರೀಕಾಂತ್ ಕುಲಕರ್ಣಿ ಹೆಸರನ್ನು ಅಂತಿಮಗೊಳಿಸಲಾಗಿದೆ.

ಉಪಚುನಾವಣೆಯ ಅಭ್ಯರ್ಥಿ ಆಯ್ಕೆ ಸಂಬಂಧ ಇಂದು ಯಡಿಯೂರಪ್ಪನವರ ಡಾಲರ್ಸ್ ಕಾಲೋನಿಯಲ್ಲಿರುವ ನಿವಾಸದಲ್ಲಿ ನಾಯಕರು ಚರ್ಚೆ ನಡೆಸಿದರು. ಈ ಸಭೆಯಲ್ಲಿ ಜಮಖಂಡಿ ಕ್ಷೇತ್ರದ ಅಭ್ಯರ್ಥಿ ವಿಷಯವಾಗಿ ಬಿಸಿಬಿಸಿ ಚರ್ಚೆ ನಡೆಯಿತು. ಕೊನೆಗೆ ಸಂಧಾನ ಸಮಾಧಾನ ನಡೆದು ಹೆಸರು ಅಂತಿಮವಾಗಿದೆ.

ಜಮಖಂಡಿಯಿಂದ ಸಂಗಮೇಶ್ ನಿರಾಣಿ ಸ್ಪರ್ಧಿಸಲು ಆಸಕ್ತಿ ತೋರಿಸಿದ್ದರು. ಹೀಗಾಗಿ ಸಂಗಮೇಶ್ ಅವರನ್ನು ಬಿಎಸ್‍ವೈ ಮುರುಗೇಶ್ ನಿರಾಣಿ ಮೂಲಕ ಮನ ಒಲಿಸುವಲ್ಲಿ ಯಶಸ್ವಿಯಾದರು ಎಂದು ಮೂಲಗಳು ತಿಳಿಸಿವೆ. ರಾಮನಗರದಲ್ಲಿ ನಾನು ಸ್ಪರ್ಧಿಸುವುದಿಲ್ಲ ಎಂದು ಸಿಪಿ ಯೋಗೇಶ್ವರ್ ಹೇಳಿದ ಹಿನ್ನೆಲೆಯಲ್ಲಿ ರುದ್ರೇಶ್ ಹೆಸರು ಅಂತಿಮಗೊಳ್ಳುವ ಸಾಧ್ಯತೆಯಿದೆ. ರಾಮನಗರ, ಮಂಡ್ಯ ಅಭ್ಯರ್ಥಿಗಳ ಆಯ್ಕೆ ಅಧಿಕಾರವನ್ನು ಬಿಎಸ್‍ವೈ ಹೊಂದಿದ್ದು, ಮೂರು ದಿನಗಳಲ್ಲಿ ಅಭ್ಯರ್ಥಿಯ ಹೆಸರನ್ನು ಪ್ರಕಟಿಸಲಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Share This Article
Leave a Comment

Leave a Reply

Your email address will not be published. Required fields are marked *