ಸ್ಯಾಂಡಲ್‍ವುಡ್‍ನ ಯಾರನ್ನೂ ದುರುಪಯೋಗಪಡಿಸಿಕೊಳ್ಳಲ್ಲ: ಸುಮಲತಾಗೆ ನಿಖಿಲ್ ಟಾಂಗ್

Public TV
2 Min Read

– ನಮ್ಮ ಕಾರ್ಯಕರ್ತರೇ ನನ್ನ ಸೈನಿಕರು

ಮಂಡ್ಯ: ಸುಮಲತಾ ಅಂಬರೀಶ್ ಅವರ ಬೆಂಬಲಕ್ಕೆ ಸ್ಯಾಂಡಲ್‍ವುಡ್‍ನ ಅನೇಕ ನಟ, ನಟಿಯರು, ನಿರ್ಮಾಪಕರು ನಿಂತಿದ್ದಾರೆ. ಹೀಗಾಗಿ ಫಿಲ್ಮಿ ಸ್ಟೈಲ್‍ನಲ್ಲಿಯೇ ನಿಖಿಲ್ ಕುಮಾರಸ್ವಾಮಿ, ಸುಮತಲಾ ಅವರಿಗೆ ಟಾಂಗ್ ಕೊಟ್ಟಿದ್ದಾರೆ.

ಸ್ಯಾಂಡಲ್‍ವುಡ್‍ನಲ್ಲಿ ಯಾರು ನನ್ನ ಪರ ಪ್ರಚಾರಕ್ಕೆ ಬರಲ್ಲ. ಅಷ್ಟೇ ಅಲ್ಲದೆ ನಾನು ಸ್ಯಾಂಡಲ್‍ವುಡ್‍ನ ಯಾರನ್ನೂ ದುರುಪಯೋಗ ಪಡಿಸಿಕೊಳ್ಳಲ್ಲ. ನಮ್ಮ ಕಾರ್ಯಕರ್ತರೇ ನನ್ನ ಸೈನಿಕರು ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.

ಸುಮಲತಾ ಅವರ ಪರ ಪ್ರಚಾರ ಮಾಡುವುದಾಗಿ ನಟ ದರ್ಶನ್ ಬಹಿರಂಗಪಡಿಸಿದ್ದಾರೆ. ಜೊತೆಗೆ ರಾಕಿಂಗ್ ಸ್ಟಾರ್ ಯಶ್ ಸೇರಿದಂತೆ ಇಡೀ ಸ್ಯಾಂಡಲ್‍ವುಡ್ ಸುಮಲತಾ ಪರ ಪ್ರಚಾರ ಮಾಡಲು ಸಿದ್ಧವಾಗಿದೆ. ನನಗೆ ಟಿಕೆಟ್ ನೀಡುವ ಕುರಿತು ಜೆಡಿಎಸ್ ರಾಷ್ಟ್ರಾಧ್ಯಕ್ಷ ಎಚ್.ಡಿ.ದೇವೇಗೌಡ ಅವರು ಮಂಡ್ಯದಲ್ಲಿ ನಾಳೆ ಘೋಷಣೆ ಮಾಡಲಿದ್ದಾರೆ ಎಂದು ನಿಖಿಲ್ ತಿಳಿಸಿದರು.

ಅಭಿಷೇಕ್ ನನ್ನ ಒಳ್ಳೆಯ ಸ್ನೇಹಿತ. ರಾಜಕಾರಣದಿಂದ ನಮ್ಮಿಬ್ಬರ ಸಂಬಂಧ ಹಾಳಾಗಲು ನಾನು ಅವಕಾಶ ಮಾಡಿಕೊಡುವುದಿಲ್ಲ. ಅಭಿಷೇಕ್ ಹಾಗೂ ನಾನು ಇಬ್ಬರು ಬ್ಯುಸಿ ಇದ್ದೇವೆ. ಇತ್ತೀಚೆಗೆ ಇಬ್ಬರು ಸೇರಿ ಮಾತನಾಡಿಲ್ಲ. ಲೋಕಸಭಾ ಚುನಾವಣೆಯ ನಂತರ ಫ್ರೀ ಮಾಡಿಕೊಂಡು ಮಾತನಾಡುತ್ತೇವೆ ಎಂದು ತಿಳಿಸಿದರು.

ಮಂಡ್ಯದಿಂದಲೇ ಸ್ಪರ್ಧೆ ಮಾಡುತ್ತೇನೆ. ದೇವರ ಮೇಲೆ ನಮ್ಮ ಕುಟುಂಬಕ್ಕೆ ಹಿಂದಿನಿಂದಲೂ ನಂಬಿಕೆ. ದೇವರ ಅನುಗ್ರಹದಿಂದ ನಮ್ಮ ಕುಟುಂಬಕ್ಕೆ ಒಳ್ಳೆಯದಾಗಿದೆ. ಹೀಗಾಗಿ ದೇವರಿಗೆ ಪೂಜೆ ಮಾಡಿ ಇಂದಿನಿಂದ ಪ್ರಚಾರ ಆರಂಭಿಸಿದ್ದೇನೆ ಎಂದು ಹೇಳಿದರು.

ಟೆಂಪಲ್ ರನ್: ಮದ್ದೂರು ತಾಲ್ಲೂಕಿನ ಗೊಲ್ಲರದೊಡ್ಡಿ ಗ್ರಾಮದ ಜುಂಜಪ್ಪ ಹಾಗೂ ಚಿಕ್ಕಂಕನಹಳ್ಳಿ ಗ್ರಾಮದ ನಂದಿ ಬಸವೇಶ್ವರ ದೇವಸ್ಥಾನಕ್ಕೆ ನಿಖಿಲ್ ಕುಮಾರಸ್ವಾಮಿ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಗೊಲ್ಲರದೊಡ್ಡಿ ಗ್ರಾಮದ ಜುಂಜಪ್ಪ ದೇವರಿಗೆ ಪೂಜೆ ಸಲ್ಲಿಸಿದರೆ ಇಷ್ಟಾರ್ಥ ಸಿದ್ಧಿಯಾಗುತ್ತದೆ ಎಂಬ ನಂಬಿಕೆಯಿದೆ. ಹೀಗಾಗಿ ಮದ್ದೂರು ಭಾಗದ ಜನ ಯಾವುದೇ ಕಾರ್ಯ ನೆರವೇರಿಸುವಾಗ ಮೊದಲು ಜುಂಜಪ್ಪ ದೇವರಿಗೆ ಪೂಜೆ ಸಲ್ಲಿಸುತ್ತಾರೆ. ಈ ಹಿನ್ನೆಲೆಯಲ್ಲಿ ನಿಖಿಲ್ ಕುಮರಸ್ವಾಮಿ ಅವರು ಕೂಡ ಜುಂಜಪ್ಪ ದೇವರಿಗೆ ಪೂಜೆ ಸಲ್ಲಿಸಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *