ಕರ್ನಾಟಕಕ್ಕೆ ಅನ್ಯಾಯ, ಮೋದಿ ಸರ್ಕಾರ ರೈತರನ್ನು ದ್ವೇಷಿಸುತ್ತಿದೆ: ಸಿಎಂ ಕಿಡಿ

Public TV
1 Min Read

ಬೆಂಗಳೂರು: ಬರ ಪರಿಹಾರ (Drought Relief Fund) ವಿಳಂಬ ಖಂಡಿಸಿ ಕಾಂಗ್ರೆಸ್ ನಾಯಕರು (Congress Leades) ವಿಧಾನಸೌಧ ಗಾಂಧಿ ಪ್ರತಿಮೆ ಮುಂದೆ ಪ್ರತಿಭಟನೆ ನಡೆಸಿದರು.

ಸಿಎಂ ಸಿದ್ದರಾಮಯ್ಯ (CM Siddaramaiah) ನೇತೃತ್ವದಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೆವಾಲ, ಸಚಿವರಾದ ರಾಮಲಿಂಗ ರೆಡ್ಡಿ, ಕೆ.ಜೆ.ಜಾರ್ಜ್ ಹಾಗೂ ಕೃಷ್ಣ ಬೈರೇಗೌಡ ಕೇಂದ್ರ  ಸರ್ಕಾರದ ವಿರುದ್ದ ಪೋಸ್ಟರ್ ಪ್ರದರ್ಶಿಸಿ ಕಿಡಿಕಾರಿದರು. ಇದನ್ನೂ ಓದಿ: ತಂದೆಯ ಕಾರು ಹರಿದು ಪುಟ್ಟ ಕಂದಮ್ಮ ದುರ್ಮರಣ

ಬೇಡ ಬೇಡ ಖಾಲಿ ಚೊಂಬು ಬೇಡ. ಚೋಂಬೇಶ್ವರನಿಗೆ ಚೊಂಬು ಕೊಟ್ಟ ಮೋದಿಗೆ (PM Narendra Modi) ಧಿಕ್ಕಾರ. ನರೇಂದ್ರ ಚೊಂಬೇಶ್ವರನಿಗೆ ಧಿಕ್ಕಾರ ಎಂದು ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು. ಇದನ್ನೂ ಓದಿ: ತರಬೇತಿ ವೇಳೆ ಪರಸ್ಪರ ಡಿಕ್ಕಿ ಹೊಡೆದುಕೊಂಡ ಹೆಲಿಕಾಪ್ಟರ್‌ಗಳು- 10 ಮಂದಿ ದುರ್ಮರಣ

ಕಾಂಗ್ರೆಸ್ ಪಕ್ಷದ ವತಿಯಿಂದ ಕರ್ನಾಟಕ ಬಗ್ಗೆ ಕೇಂದ್ರದ ಮಲತಾಯಿ ಧೋರಣೆ ಖಂಡಿಸಿ ಪ್ರತಿಭಟನೆ ಮಾಡಿದ್ದೇವೆ. ಮೋದಿ ಮತ್ತು ಅಮಿತ್ ಶಾ ಕರ್ನಾಟಕ ರೈತರನ್ನು ದ್ವೇಷ ಮಾಡುತ್ತಿದ್ದಾರೆ. ಕರ್ನಾಟಕದ 220 ತಾಲೂಕಿನಲ್ಲಿ ಬರ ಇದೆ. ನಾವು ಗ್ಯಾರಂಟಿ ಯೋಜನೆಗೆ ದುಡ್ಡು ಕೇಳುತ್ತಿಲ್ಲ. ಬರದ ಪರಿಹಾರವನ್ನು ಕೇಳುತ್ತಿದ್ದೇವೆ ಎಂದು ಹೇಳಿದರು.

ಅಮಿತ್ ಶಾ ಹಾಗೂ ಮೋದಿ ಯಾವ ಮುಖ ಇಟ್ಟುಕೊಂಡು ರಾಜ್ಯಕ್ಕೆ ಬರುತ್ತೀರಿ? 18 ಸಾವಿರ ಕೋಟಿ ಬರ ಪರಿಹಾರ ಕೊಡದೇ ಸುಳ್ಳು ಹೇಳುತ್ತಿದ್ದಾರೆ. ಕರ್ನಾಟಕದ ಬಗ್ಗೆ ಮಲತಾಯಿ ಧೋರಣೆ ಯಾಕೆ? ಕನ್ನಡಿಗರ ಮೇಲೆ ದ್ವೇಷ ಯಾಕೆ ಎಂದು ಪ್ರಶ್ನಿಸಿ ಸಿಎಂ ವಾಗ್ದಾಳಿ ನಡೆಸಿದರು.

 

Share This Article