ಬಾಗಲಕೋಟೆ: ಆದಾಯ ಮೀರಿ ಅಕ್ರಮ ಆಸ್ತಿಗಳಿಕೆ ಆರೋಪದ ಹಿನ್ನೆಲೆಯಲ್ಲಿ ಬಾಗಲಕೋಟೆಯ (Bagalkote) ನವನಗರದಲ್ಲಿರುವ ಸಹಾಯಕ ಮುಖ್ಯ ಎಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು (Lokyukta Officials) ದಾಳಿ ನಡೆಸಿದ್ದಾರೆ.
ಕೆಬಿಜೆಎನ್ಎಲ್ನ ಆಲಮಟ್ಟಿ (Almatti Dam) ಬಲದಂಡೆ ಕಾಲುವೆಯ ಸಹಾಯಕ ಮುಖ್ಯ ಎಂಜಿನಿಯರ್ ಚೇತನ್ ಮಾಳಜಿ ಅವರ ಮನೆ ಮತ್ತು ಕಮತಗಿಯಲ್ಲಿರುವ ಕೆಬಿಜೆಎನ್ಎಲ್ ಕಚೇರಿ ಮೇಲೆ ಲೋಕಾಯುಕ್ತ ಎಸ್.ಪಿ ಮಲ್ಲೇಶ್ ಮಾರ್ಗದರ್ಶನದಲ್ಲಿ ಡಿವೈಎಸ್.ಪಿ ನೇತೃತ್ವದ 12 ಸಿಬ್ಬಂದಿಗಳ ತಂಡ ದಾಳಿ ಮಾಡಿದೆ. ಇದನ್ನೂ ಓದಿ: ಫೋನ್ ಟ್ಯಾಪಿಂಗ್ ಕೇಸ್; ಅಲೋಕ್ ಕುಮಾರ್ ವಿರುದ್ಧದ ತನಿಖಾ ಆದೇಶ ರದ್ದು – ಸರ್ಕಾರಕ್ಕೆ ಭಾರೀ ಹಿನ್ನಡೆ
ಚೇತನ್ ಮಾಳಜಿ ಅವರ ನವನಗರದ ಸೆಕ್ಟರ್ ನಂಬರ್ 16 ರಲ್ಲಿರುವ ಮನೆ ಹಾಗೂ ಕಮತಗಿ ಕಛೇರಿ ಮೇಲೆ ಏಕಕಾಲಕ್ಕೆ ದಾಳಿ ನಡೆಸಿ ಅಧಿಕಾರಿಗಳು ದಾಖಲೆ ಪರಿಶೀಲಿಸುತ್ತಿದ್ದಾರೆ.