ಲೋಕಸಭಾ ಚುನಾವಣೆ- ರಾಹುಲ್ ಗೆ ಸಿದ್ದರಾಮಯ್ಯ ಮನವಿ

Public TV
1 Min Read

ನವದೆಹಲಿ: ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ಸೀಟು ಹಂಚಿಕೆ ವಿಚಾರದಲ್ಲಿ ಮೈತ್ರಿ ಸರ್ಕಾರದಲ್ಲಿ ಗೊಂದಲ ನಿರ್ಮಾಣವಾಗಿದೆ.

ಮಂಡ್ಯ, ಹಾಸನ ಆಯ್ತು ಈಗ ಮೈಸೂರು ಬೇಕು ಅಂತ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೈಕಮಾಂಡ್ ಎದುರು ಪಟ್ಟು ಹಿಡಿದಿದ್ದಾರೆ ಎಂದು ಪಬ್ಲಿಕ್ ಟಿವಿಗೆ ಪಕ್ಷದ ಮೂಲಗಳಿಂದ ಮಾಹಿತಿ ಲಭಿಸಿದೆ.

ಮೈಸೂರು ಲೋಕಸಭೆ ಕ್ಷೇತ್ರವನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಸಿದ್ದರಾಮಯ್ಯ ಅವರು ಈಗಾಗಲೇ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಜೊತೆ ಬೇಡಿಕೆ ಇಟ್ಟಿದ್ದಾರೆ. ಮೈಸೂರು ಭಾಗದಲ್ಲಿ ಜೆಡಿಎಸ್ ಪ್ರಾಬಲ್ಯ ಹೆಚ್ಚಿದೆ ಎಂದು ಬಿಟ್ಟು ಕೊಡುವುದು ಬೇಡ. ಮೈಸೂರಿನಲ್ಲಿ ಇದುವರೆಗೂ ಲೋಕಸಭೆಯಲ್ಲಿ ಜೆಡಿಎಸ್ ಗೆಲುವು ಸಾಧಿಸಿಲ್ಲ. ಈ ಹಿನ್ನೆಲೆಯಲ್ಲಿ ಜೆಡಿಎಸ್ ಗೆ ಮೈಸೂರು ಕ್ಷೇತ್ರ ಬಿಟ್ಟು ಕೊಡದಂತೆ ಮನವಿ ಮಾಡಿಕೊಂಡಿದ್ದಾರೆ.

ಒಟ್ಟಿನಲ್ಲಿ ತವರು ಕ್ಷೇತ್ರವನ್ನು ಉಳಿಸಿಕೊಳ್ಳು ಮಾಜಿ ಸಿಎಂ ಹಠಕ್ಕೆ ಬಿದ್ದಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *