ಬೆಂಗಳೂರು: ನೆಲಮಂಗಲ ತಾಲೂಕಿನ ಅರಿಶಿನಕುಂಟೆ ಬಳಿ ಬೈಕಿಗೆ ಹಿಂಬದಿಯಿಂದ ಲಾರಿ ಡಿಕ್ಕಿಯಾದ ಪರಿಣಾಮ ಮಹಿಳೆ ಸಾವನ್ನಪ್ಪಿದ್ದಾರೆ.
ಆಶಾ(24) ಸ್ಥಳದಲ್ಲೇ ಸಾವನ್ನಪ್ಪಿದ ಮಹಿಳೆ. ಆಶಾ ತನ್ನ ಪತಿ ಮಂಜುನಾಥ್ ಜೊತೆ ಬೆಂಗಳೂರಿನಿಂದ ಸ್ವಗ್ರಾಮ ತ್ಯಾಮಗೊಂಡ್ಲುಗೆ ತೆರಳುತ್ತಿದ್ದರು. ಆಗ ಲಾರಿಯೊಂದು ಬೈಕಿನ ಹಿಂಬಂದಿಗೆ ಡಿಕ್ಕಿ ಹೊಡೆದಿದೆ. ಲಾರಿ ಡಿಕ್ಕಿಯಾದ ರಭಸಕ್ಕೆ ರಸ್ತೆಯ ಬಲಭಾಗಕ್ಕೆ ಬಿದ್ದು ಆಶಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಅಪಘಾತ ನಡೆಯುತ್ತಿದ್ದಂತೆ ಲಾರಿ ಚಾಲಕ ಘಟನಾ ಸ್ಥಳದಿಂದ ಪರಾರಿಯಾಗಿದ್ದಾನೆ. ಇನ್ನೂ ಮಂಜುನಾಥ್ ಹಾಗೂ ಆಕೆಯ ಮಕ್ಕಳು ಕೂದಲೆಳೆ ಅಂತರದಲ್ಲಿ ಅಪಘಾತದಿಂದ ಪಾರಾಗಿದ್ದಾರೆ.
ಘಟನೆ ಸಂಬಂಧ ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.