ಧಾರವಾಡ: ಹತ್ತಿ ಚೀಲಗಳನ್ನು ಹೊತ್ತೊಯ್ಯುತ್ತಿದ್ದ ಲಾರಿವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಆಗಿರುವ ಘಟನೆ ಹುಬ್ಬಳ್ಳಿಯ ಬೆಂಗಳೂರು ಪೂನಾ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಹುಬ್ಬಳ್ಳಿಯ ನೇಕಾರ ನಗರದ ಬಳಿ ಲಾರಿ ಪಲ್ಟಿ ಆಗಿದ್ದು, ಘಟನೆಯಲ್ಲಿ ಯಾವುದೇ ಪ್ರಾಣಾಪಯ ಸಂಭವಿಸಿಲ್ಲ. ತಮಿಳುನಾಡು ಮೂಲದ ಲಾರಿ ಇದಾಗಿದ್ದು, ಕಾರವಾರದಿಂದ ಗಬ್ಬೂರು ಮಾರ್ಗವಾಗಿ ತಮಿಳುನಾಡಿಗೆ ತೆರಳುತ್ತಿತ್ತು. ಆದರೆ ಮಾರ್ಗ ಮಧ್ಯೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಬೃಹತ್ ಲಾರಿ ಪಲ್ಟಿಯಾಗಿದೆ.
ಅಪಘತದ ಬಳಿಕ ಸ್ಥಳದಲ್ಲಿಯೇ ಲಾರಿ ಬಿಟ್ಟು ಲಾರಿ ಚಾಲಕ ಹಾಗೂ ಸಹಾಯಕ ಪರಾರಿಯಾಗಿದ್ದಾರೆ. ಕಾರಣ ಹೆದ್ದಾರಿಯಲ್ಲಿ ಕೆಲ ಕಾಲ ಸಂಚಾರ ದಟ್ಟನೆ ಹೆಚ್ಚಾಗಿತ್ತು. ಬಳಿಕ ಸ್ಥಳಕ್ಕೆ ದಕ್ಷಿಣ ಸಂಚಾರಿ ಪೊಲೀಸರಿಂದ ಭೇಟಿ ನೀಡಿ ಸಂಚಾರ ನಿಯಂತ್ರಣ ಸುಗಮಗೊಳಿಸಿದ್ದಾರೆ.