ಡೀಸೆಲ್‌ ಮೇಲಿನ ವ್ಯಾಟ್ ಕಡಿಮೆ‌ ಮಾಡದಿದ್ದರೆ ಲಾರಿ ಮುಷ್ಕರ : ಷಣ್ಮುಗಪ್ಪ

Public TV
1 Min Read

ಬೆಂಗಳೂರು: ಡೀಸೆಲ್‌ ಮೇಲೆ ವಿಧಿಸಿರುವ ವ್ಯಾಟ್‌ ಅನ್ನು ರಾಜ್ಯ ಸರ್ಕಾರ ಕಡಿಮೆ ಮಾಡಬೇಕು ಇಲ್ಲವಾದಲ್ಲಿ ಲಾರಿ ಮಾಲೀಕರು ಅನಿರ್ದಿಷ್ಟಾವಧಿ ಮುಷ್ಕರ ಕೈಗೊಳ್ಳಬೇಕಾಗುತ್ತದೆ ಎಂದು ಲಾರಿ ಮಾಲೀಕರ ಸಂಘದ ಅಧ್ಯಕ್ಷ ಷಣ್ಮುಗಪ್ಪ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಕಳೆದ ಒಂದು ವರ್ಷದಲ್ಲಿ ಡೀಸೆಲ್ ಬೆಲೆ 26 ರೂಪಾಯಿಯಷ್ಟು ಹೆಚ್ಚಾಗಿದೆ.‌ ಇದರಿಂದಾಗಿ ಶೇ. 30 ರಷ್ಟು ಲಾರಿಗಳು ಶೆಡ್ ಸೇರಿವೆ. ದಿನದಿಂದ‌ ದಿನಕ್ಕೆ ಡೀಸೆಲ್‌ ಬೆಲೆ ಗಗನಕ್ಕೆ ಏರುತ್ತಾ ಶತಕ ಬಾರಿಸಿದೆ.‌‌ ಅದರೂ‌ ಕೇಂದ್ರ ಮತ್ತು ರಾಜ್ಯ ಸರ್ಕಾರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ.‌ ಡೀಸೆಲ್‌‌ ಬೆಲೆ ಏರಿಕೆಯಾಗ್ತಿರೋದ್ರಿಂದ ಎಲ್ಲ ಅಗತ್ಯ ವಸ್ತುಗಳ ಬೆಲೆಯೂ‌ ಏರಿಕೆಯಾಗ್ತಿದೆ ಜನ ಸಾಮಾನ್ಯರಿಗೆ ದೊಡ್ಡ ಹೊರೆಯಾಗ್ತಿದೆ ಎಂದರು. ಇದನ್ನೂ ಓದಿ: ಮಳೆರಾಯನ ಆರ್ಭಟಕ್ಕೆ ಬೆಚ್ಚಿಬಿದ್ದ ಕೇರಳ – ಸಾವಿನ ಸಂಖ್ಯೆ 26ಕ್ಕೆ ಏರಿಕೆ

ವ್ಯಾಟ್‌ ಇಳಿಕೆಯಾಗದೇ ಇದ್ದರೆ ಅಕ್ಟೋಬರ್ 23 ರಂದು ಲಾರಿ‌ ಮಾಲೀಕರು ಸಭೆ ಮಾಡಿ‌ ಅನಿವಾರ್ಯವಾಗಿ ಲಾರಿ ಮುಷ್ಕರ ಮಾಡಬೇಕಾಗುತ್ತೆ.‌ ಅಷ್ಟರ ಒಳಗಡೆ ರಾಜ್ಯ ಸರ್ಕಾರ ಡೀಸೆಲ್‌ ಮೇಲಿನ ವ್ಯಾಟ್ ಕಡಿಮೆ‌ ಮಾಡಬೇಕು. ಇಲ್ಲವಾದಲ್ಲಿ 6 ಲಕ್ಷ ಲಾರಿಗಳು ರಸ್ತೆಗಿಳಿಯದೇ ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *