ಪ್ರೇಮ ವೈಫಲ್ಯದಿಂದ ಮನನೊಂದು ಯುವಕ ಆತ್ಮಹತ್ಯೆ- ಸಾವಿನಲ್ಲೂ ಸಾರ್ಥಕತೆ

Public TV
1 Min Read

ಶಿವಮೊಗ್ಗ: ಪ್ರೇಮ (Love) ವೈಫಲ್ಯದಿಂದ ಮನನೊಂದ ಯುವ ನೇಣು ಬಿಗಿದುಕೊಂಡು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಶಿವಮೊಗ್ಗ (Shivamogga) ಜಿಲ್ಲೆಯ ಶಿಕಾರಿಪುರ ತಾಲೂಕಿನ ಹಿತ್ತಲ ಗ್ರಾಮದಲ್ಲಿ ನಡೆದಿದೆ.

ಹಿತ್ತಲ ಗ್ರಾಮದ ಮದನ್ ಕುಮಾರ್ (24) ಆತ್ಮಹತ್ಯೆ ಮಾಡಿಕೊಂಡ ಯುವಕ. ಡೆತ್ ನೋಟ್ ಬರೆದಿಟ್ಟು ಕಳೆದ ನಾಲ್ಕು ದಿನಗಳ ಹಿಂದೆಯೇ ತನ್ನ ಜಮೀನಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ (Suicide) ಶರಣಾಗಿದ್ದಾನೆ. ಇದನ್ನೂ ಓದಿ: ಕೊಟ್ಟ ಮಾತಿನಂತೆ ಕಿರುತೆರೆ ನಟಿ ಸ್ವಪ್ನಾ ಪತಿಗೆ ಕೆಲಸ ಕೊಡಿಸಿದ ಗೋಲ್ಡನ್ ಸ್ಟಾರ್ ಗಣೇಶ್

ಮದನ್ ಕುಮಾರ್ ಅದೇ ಗ್ರಾಮದ ಯುವತಿಯನ್ನು ಪ್ರೀತಿಸುತ್ತಿದ್ದ. ಆದರೆ ಯುವತಿ ಮನೆಯವರು ಯುವಕನ ವಿರುದ್ಧ ಅತ್ಯಾಚಾರ ಹಾಗೂ ಕಿರುಕುಳ ನೀಡುತ್ತಿದ್ದ ಆರೋಪ ಹೊರಿಸಿ, ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆಗೆ (Police Station) ದೂರು ನೀಡಿದ್ದರು. ಈ ಸಂಬಂಧ ಪ್ರಕರಣವೂ ದಾಖಲಾಗಿತ್ತು. ಯುವತಿ ಮನೆಯವರ ಕಿರುಕುಳದಿಂದ ಮನನೊಂದ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದನ್ನೂ ಓದಿ: ರಾಜ್ಯದಲ್ಲಿ ಯೋಗಿ ಮಾದರಿ ಆಡಳಿತ ಬೇಕು ಎಂದು ಪ್ರತಿಪಾದಿಸುವವರು ಅತ್ಯಾಚಾರಿಗಳ ಸಮರ್ಥಕರಿದ್ದಂತೆ: ದಿನೇಶ್ ಗುಂಡೂರಾವ್

ಆತ್ಮಹತ್ಯೆಗೂ ಮುನ್ನ ಯುವಕ ತನ್ನ ಅಂಗಾಂಗ ದಾನ ಮಾಡುವಂತೆ ಡೆತ್ ನೋಟ್ ಬರೆದಿಟ್ಟಿದ್ದಾನೆ. ಕುಟುಂಬಸ್ಥರು ಅಂಗಾಂಗ ದಾನ ಮಾಡಿದ್ದಾರೆ. ತನ್ನ ಪ್ರೇಮ ವೈಫಲ್ಯದ ನಡುವೆಯೂ ಯುವಕ ಮಾನವೀಯತೆ ಮೆರೆದಿದ್ದಾನೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *