ಲವ್ ಜಿಹಾದ್ ಮಹಾಭಾರತದಲ್ಲೂ ನಡೆದಿದೆ: ವಿವಾದಿತ ಹೇಳಿಕೆ ನೀಡಿದ ಅಸ್ಸಾಂ ಕಾಂಗ್ರೆಸ್ ಅಧ್ಯಕ್ಷ

Public TV
1 Min Read

ದಿಸ್ಪುರ್: ಲವ್ ಜಿಹಾದ್ (Love Jihad) ವಿಚಾರವಾಗಿ ಅಸ್ಸಾಂನಲ್ಲಿ (Assam) ಭಾರೀ ರಾಜಕೀಯ ನಡೆದಿದೆ. ಬಿಜೆಪಿಗರ ವಿರುದ್ಧ ವಾಗ್ದಾಳಿ ನಡೆಸುವ ಭರದಲ್ಲಿ ಕಾಂಗ್ರೆಸ್ ನಾಯಕರೊಬ್ಬರು ಕೃಷ್ಣ-ರುಕ್ಮಿಣಿ (Krishna Rukmini) ಪ್ರೇಮಗಾಥೆಗೆ ಪರೋಕ್ಷವಾಗಿ ಲವ್ ಜಿಹಾದ್ ಟಚ್ ನೀಡಿದ್ದಾರೆ. ಇದು ಭಾರೀ ಚರ್ಚೆಗೆ ಗ್ರಾಸವಾಗಿದೆ.

ಇತ್ತೀಚೆಗೆ ಅಸ್ಸಾಂನಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬ ತನ್ನ ಹಿಂದೂ ಪತ್ನಿ ಮತ್ತು ಆಕೆಯ ತಂದೆ ತಾಯಿಯನ್ನು ಕೊಂದಿದ್ದ. ಈ ಪ್ರಕರಣವನ್ನು ಲವ್ ಜಿಹಾದ್ ಎಂದು ಸಿಎಂ ಹಿಮಂತ ಬಿಸ್ವಾ ಶರ್ಮಾ ಕರೆದಿದ್ದರು. ಈ ಹೇಳಿಕೆಯನ್ನು ವಿರೋಧಿಸುವ ಭರದಲ್ಲಿ ಅಸ್ಸಾಂ ಕಾಂಗ್ರೆಸ್ ಅಧ್ಯಕ್ಷ ಭೂಪೇನ್ ಬೋರಾ (Bhupen Borah) ಕೃಷ್ಣ-ರುಕ್ಮಿಣಿ ಮದುವೆ ವಿಚಾರವನ್ನು ಎಳೆದುತಂದಿದ್ದಾರೆ.

ಲವ್ ಜಿಹಾದ್ ಮಹಾಭಾರತದಲ್ಲೂ (Mahabharat) ನಡೆದಿದೆ. ಪುರಾಣ ಗ್ರಂಥಗಳಲ್ಲಿ ಕೃಷ್ಣನು ರುಕ್ಮಿಣಿಯನ್ನು ಓಡಿಸಿಕೊಂಡು ಹೋಗಿರುವ ಉಲ್ಲೇಖವಿದೆ. ಇಂದಿನ ಕಾಲದಲ್ಲಿ ಬೇರೆ ಬೇರೆ ಧರ್ಮ, ಬೇರೆ ಬೇರೆ ಜಾತಿಗಳ ಯುವಕ-ಯುವತಿಯರು ಮದುವೆ ಆಗುವುದು ಸಾಮಾನ್ಯವಾಗಿದೆ. ಇದನ್ನು ಲವ್ ಜಿಹಾದ್‌ಗೆ ಹೋಲಿಸುವುದು ಸರಿಯಲ್ಲ ಎಂದು ಬೋರಾ ಹೇಳಿಕೆ ನೀಡಿದ್ದಾರೆ.

ಈ ಹೇಳಿಕೆಗೆ ಕೆರಳಿದ ಹಿಮಾಂತ ಶರ್ಮಾ, ಇದು ಖಂಡನೀಯ, ಎಲ್ಲಾ ಸನಾತನಿಗಳು ಬೋರಾ ವಿರುದ್ಧ ಕೇಸ್ ದಾಖಲಿಸಿದರೆ, ನಮ್ಮ ಸರ್ಕಾರ ಕ್ರಮ ತೆಗೆದುಕೊಳ್ಳದೇ ಇರಲು ಸಾಧ್ಯವಿಲ್ಲ. ಯಾರಾದರೂ ದೂರು ನೀಡಿದರೆ ಅವರನ್ನು ಬಂಧಿಸಲಾಗುತ್ತದೆ ಎಂದು ಘೋಷಿಸಿದ್ದಾರೆ. ಇದನ್ನೂ ಓದಿ: ಡ್ರೋನ್ ಮೂಲಕ ಪಂಜಾಬ್‌ಗೆ ಡ್ರಗ್ಸ್ ಸಪ್ಲೈ ಮಾಡಲಾಗ್ತಿದೆ: ಪಾಕ್ ಪ್ರಧಾನಿ ಆಪ್ತ

ತಮ್ಮ ಹೇಳಿಕೆ ಭಾರೀ ವಿವಾದಕ್ಕೆ ಕಾರಣವಾಗುತ್ತಿದ್ದಂತೆ ಇದೀಗ ಭೂಪೇನ್ ಬೋರಾ ವೈಷ್ಣವ ಪ್ರಾರ್ಥನೆ ಹಾಡುವ ಮೂಲಕ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದಾರೆ. ಇದನ್ನೂ ಓದಿ: ರಾಹುಲ್‌ಗೆ ಮೊಣಕಾಲು ನೋವು – ಕೇರಳದಲ್ಲಿ ಆಯುರ್ವೇದ ಚಿಕಿತ್ಸೆ

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್