ಆತ್ಮಹತ್ಯೆಗೆ ಯತ್ನಿಸಿದ ಪ್ರೇಮಿಗಳು- ಚಿಕಿತ್ಸೆ ಫಲಿಸದೇ ಪ್ರಿಯಕರ ಸಾವು!

Public TV
1 Min Read

ಶಿವಮೊಗ್ಗ: ತಮ್ಮ 4 ವರ್ಷದ ಪ್ರೀತಿಗೆ ಜಾತಿ ಅಡ್ಡಿಯಾಗಬಹುದು ಎಂಬ ಭಯದಿಂದ ಪ್ರೇಮಿಗಳಿಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಚಿಕಿತ್ಸೆ ಫಲಿಸದೇ ಪ್ರಿಯಕರ ಸಾವಿಗೀಡಾಗಿರುವ ಘಟನೆ ಇಲ್ಲಿನ ಹೆಗ್ಗನಕೆರೆ ಅರಣ್ಯ ಪ್ರದೇಶದ ಬಳಿ ನಡೆದಿದೆ.

ಶಿವಮೊಗ್ಗದ ರಾಮನಗರ ನಿವಾಸಿಗಳಾದ ಶ್ರೀನಿವಾಸ್ (23) ಹಾಗೂ ಆತನ ಪ್ರೇಯಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಇದನ್ನೂ ಓದಿ: ನ್ಯೂಜಿಲೆಂಡ್ ವಿರುದ್ಧ ಟಿ20 ಸರಣಿ – ರೋಹಿತ್ ಶರ್ಮಾಗೆ ನಾಯಕ ಪಟ್ಟ

ಶ್ರೀನಿವಾಸ್ ಹಾಗೂ ಯುವತಿ ಕಳೆದ 4 ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಇಬ್ಬರು ಸಹ ಅನ್ಯಜಾತಿಗೆ ಸೇರಿದವರಾಗಿದ್ದರು. ಆದರೆ ಇಬ್ಬರ ಪ್ರೀತಿಯ ವಿಷಯ ಎರಡು ಮನೆಯ ಕುಟುಂಬಸ್ಥರಿಗೆ ತಿಳಿದಿರಲಿಲ್ಲ. ನಮ್ಮ ಮುಂದಿನ ಜೀವನಕ್ಕೆ ಜಾತಿ ಅಡ್ಡಿಯಾಗಬಹುದು ಎಂದು ಹೆದರಿ ಪ್ರೇಮಿಗಳು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇದನ್ನೂ ಓದಿ: ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡು ಪರಸ್ಪರರನ್ನು ಹಾಡಿ ಹೊಗಳಿಕೊಂಡ ಸಿದ್ದು-ಜಿಟಿಡಿ

POLICE JEEP

ವಿಷ ಸೇವಿಸಿದ ನಂತರ ನೋವನ್ನು ತಾಳಲಾರದೇ ಪ್ರಿಯಕರ ಶ್ರೀನಿವಾಸ್, ವಿಷ ಸೇವಿಸಿರುವ ಬಗ್ಗೆ ಸ್ನೇಹಿತರಿಗೆ ಫೋನ್ ಕರೆ ಮಾಡಿ ತಿಳಿಸಿದ್ದಾನೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಆತನ ಸ್ನೇಹಿತರು ಹಾಗು ಕುಟುಂಬಸ್ಥರು, ತಕ್ಷಣವೇ ಇಬ್ಬರನ್ನೂ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಶ್ರೀನಿವಾಸ್ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ. ಯುವತಿಗೆ ವೈದ್ಯರು ಚಿಕಿತ್ಸೆ ಮುಂದುವರಿಸಿದ್ದಾರೆ. ಈ ಸಂಬಂಧ ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *