ಮದ್ವೆಗೆ ನಿರಾಕರಣೆ- ಕುಂತೂರು ಬೆಟ್ಟದಲ್ಲಿ ಕ್ರಿಮಿನಾಶಕ ಸೇವಿಸಿ ಪ್ರೇಮಿಗಳು ಆತ್ಮಹತ್ಯೆ!

Public TV
0 Min Read

ಚಾಮರಾಜನಗರ: ಮನೆಯಲ್ಲಿ ಮದುವೆಗೆ ನಿರಾಕರಣೆ ಮಾಡಿದ್ದಕ್ಕೆ ಇಬ್ಬರೂ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕುಂತೂರು ಬೆಟ್ಟದಲ್ಲಿ ಜರುಗಿದೆ.

ರೋಹಿತ್ ಹಾಗೂ ಪ್ರಕೃತಿ ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು. ಕೊಳ್ಳೆಗಾಲ ತಾಲೂಕಿನ ಮುಳ್ಳೂರು ಗ್ರಾಮದ ರೋಹಿತ್ ಮತ್ತು ಪ್ರಕೃತಿ ಎಂಬ ಪ್ರೇಮಿಗಳು ಪರಸ್ಪರ ಪ್ರೀತಿಸಿದ್ದು, ಇವರ ಮದುವೆಗೆ ಮನೆಯವರು ನಿರಾಕರಣೆ ಮಾಡಿದ್ದಾರೆ.

ಈ ಹಿನ್ನೆಲೆಯಲ್ಲಿ ಇಬ್ಬರು ಪ್ರೇಮಿಗಳು ಕ್ರಿಮಿನಾಶಕ ಸೇವಿಸಿ ಕುಂತೂರು ಬೆಟ್ಟದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಯಾವ ಕಾರಣಕ್ಕೆ ಮನೆಯವರು ಇವರಿಬ್ಬರ ಮನೆಯವರು ಮದುವೆಗೆ ನಿರಾಕರಣೆ ಮಾಡಿದ್ದಾರೆ ಎಂದು ತಿಳಿದುಬಂದಿಲ್ಲ.

ಸದ್ಯ ಈ ಕುರಿತು ಕೊಳ್ಳೆಗಾಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *