ತಿಂಗ್ಳ ಹಿಂದೆ ಮದ್ವೆಯಾಗಿದ್ದ ಪ್ರಿಯಕರನ ಜೊತೆ ಸೇರಿ ಸೈನೆಡ್ ನುಂಗಿದ್ಳು..!

Public TV
1 Min Read

ತುಮಕೂರು: ಪ್ರೇಮ ವಿವಾಹಕ್ಕೆ ಮನೆಯವರಿಂದ ಅಡ್ಡಿಯಾದ ಹಿನ್ನೆಲೆಯಲ್ಲಿ ಮನನೊಂದ ಪ್ರೇಮಿಗಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಶಿರಾ ತಾಲೂಕಿನ ಭೂವನಹಳ್ಳಿಯಲ್ಲಿ ನಡೆದಿದೆ.

ಚೇತನ್ (25) ಮತ್ತು ನಿವೇದಿತಾ ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು. ಮೃತ ಚೇತನ್ ಭೂವನಹಳ್ಳಿ ನಿವಾಸಿಯಾಗಿದ್ದು, ಯುವತಿ ಶಿರಾದ ಮಾಗೋಡು ಗ್ರಾಮದವಳು ಎಂದು ತಿಳಿದುಬಂದಿದೆ. ಇಬ್ಬರು ಗುರುವಾರ ರಾತ್ರಿ ಸೈನೆಡ್ ನುಂಗಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಚೇತನ್ ಮತ್ತು ನಿವೇದಿತಾ ಇಬ್ಬರು ಸುಮಾರು 3-4 ವರ್ಷಗಳಿಂದ ಪ್ರೀತಿ ಮಾಡುತ್ತಿದ್ದರು. ಇವರಿಬ್ಬರ ಪ್ರೀತಿ ವಿಚಾರ ಮನೆಯವರಿಗೆ ಗೊತ್ತಾಗಿದೆ. ಆದರೆ ಎರಡು ಕುಟುಂಬದವರೂ ಇವರ ಮದುವೆಗೆ ನಿರಾಕರಿಸಿದ್ದಾರೆ. ಅಷ್ಟೆ ಅಲ್ಲದೆ ಒಂದೂವರೆ ತಿಂಗಳ ಹಿಂದೆಯಷ್ಟೆ ಬೇರೊಬ್ಬ ಯುವತಿಯ ಜೊತೆಗೆ ಬಲವಂತವಾಗಿ ಮೃತ ಚೇತನ್ ಮದುವೆ ಮಾಡಿಸಿದ್ದಾರೆ.

ಪ್ರೇಮಿಗಳು ತಾವು ಬೇರೆ ಬೇರೆಯಾಗಲು ಸಾಧ್ಯವಿಲ್ಲ ಎಂದು ರಾತ್ರಿ ಭೂವನಹಳ್ಳಿಯ ಹೊಲಕ್ಕೆ ಬಂದು ಇಬ್ಬರು ಸೈನೆಡ್ ನುಂಗಿದ್ದಾರೆ. ಮುಂಜಾನೆ ಜನರು ಹೊಲದ ಬಳಿ ಹೋದಾಗ ನೋಡಿ ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ಮಾಹಿತಿ ತಿಳಿದು ಶಿರಾ ನಗರ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿ ಇಬ್ಬರ ಮೃತದೇಹವನ್ನು ತುಮಕೂರಿನ ಶಿರಾ ಸರ್ಕಾರಿ ಆಸ್ಪತ್ರೆ ಶವಾಗಾರಕ್ಕೆ ರವಾನಿಸಿದ್ದಾರೆ.

ಈ ಘಟನೆ ಶಿರಾ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *