ಒಬ್ಬರನ್ನು ಒಬ್ಬರು ತಬ್ಬಿಕೊಂಡು ಬಾವಿಗೆ ಹಾರಿ ಪ್ರೇಮಿಗಳು ಆತ್ಮಹತ್ಯೆ

Public TV
1 Min Read

– 2 ತಿಂಗ್ಳ ಹಿಂದೆಯಷ್ಟೆ ಮದ್ವೆಯಾಗಿದ್ದ ಪ್ರೇಯಸಿ
– ತಂದೆಯ ಹೊಲದಲ್ಲಿದ್ದ ಬಾವಿಗೆ ಹಾರಿದ್ರು

ವಿಜಯಪುರ: ಒಬ್ಬರನ್ನು ಒಬ್ಬರು ತಬ್ಬಿಕೊಂಡು ಬಾವಿಗೆ ಜಿಗಿದು ಪ್ರೇಮಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಇಂಡಿ ತಾಲೂಕಿನ ತಾಂಬಾ ಗ್ರಾಮದಲ್ಲಿ ನಡೆದಿದೆ.

ಗಂಗಾಧರ ನಡಗಡ್ಡಿ (21) ಮತ್ತು ರಕ್ಷಿತಾ ಶಿಂಗೆ (19) ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು. ಎರಡು ದಿನಗಳ ಹಿಂದೆಯೇ ಗಂಗಾಧರ ಮತ್ತು ರಕ್ಷಿತಾ ಬಾವಿ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೆ ಬಾವಿಯಲ್ಲಿ ಕೆಟ್ಟ ವಾಸನೆ ಬರುತ್ತಿದ್ದರಿಂದ ಇಂದು ಆತ್ಮಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ.

ಗಂಗಾಧರ ಮತ್ತು ರಕ್ಷಿತಾ ಮೂರು ವರ್ಷಗಳಿಂದ ಪರಸ್ಪರ ಪ್ರೀತಿ ಮಾಡುತ್ತಿದ್ದರು. ಇವರಿಬ್ಬರ ಮದುವೆಗೆ ಮನೆಯಲ್ಲಿ ವಿರೋಧ ವ್ಯಕ್ತಪಡಿಸಿದ್ದರು. ಅಷ್ಟೇ ಅಲ್ಲದೇ ರಕ್ಷಿತಾಗೆ ಎರಡು ತಿಂಗಳು ಹಿಂದೆಯಷ್ಟೆ ಬೇರೆ ಹುಡುಗನ ಜೊತೆ ಪೋಷಕರು ಮದುವೆ ಮಾಡಿಸಿದ್ದರು. ರಕ್ಷಿತಾಗೆ ವಿವಾಹವಾಗಿ ಎರಡು ತಿಂಗಳಾದರೂ ಪತಿಯೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಲು ಸಾಧ್ಯವಾಗಿಲ್ಲ.

ಕೊನೆಗೆ ರಕ್ಷಿತಾ ತನ್ನ ಪ್ರಿಯಕರ ಗಂಗಾಧರನ ಜೊತೆ ತನ್ನ ತಂದೆಯ ಹೊಲದಲ್ಲಿದ್ದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಎರಡು ದಿನಗಳ ಹಿಂದಯೇ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೆ ಇಂದು ಬಾವಿಯಿಂದ ಕೆಟ್ಟ ವಾಸನೆ ಬರುತ್ತಿದ್ದರಿಂದ ಸ್ಥಳೀಯರು ಹೋಗಿ ನೋಡಿದಾಗ ಈ ಪ್ರಕರಣ ಬೆಳಕಿಗೆ ಬಂದಿದೆ.

ನಂತರ ಈ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ತಿಳಿಸಿದ್ದರು. ಮಾಹಿತಿ ತಿಳಿದ ಇಂಡಿ ಗ್ರಾಮೀಣ ಪೊಲೀಸರು ಸ್ಥಳಕ್ಕೆ ಬಂದು ಮೃತದೇಹವನ್ನು ಬಾವಿಯಿಂದ ಮೇಲಕ್ಕೆತ್ತಿದ್ದಾರೆ. ಇಂಡಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Share This Article
Leave a Comment

Leave a Reply

Your email address will not be published. Required fields are marked *