ಏಕಾಂಗಿಯಾಗಿ ಬಾವಿ ತೋಡಿ ನೀರು ತಂದ ಎಂಟೆಕ್ ಪದವೀಧರ

Public TV
1 Min Read

ಬೀದರ್: ಕೃಷಿಗಾಗಿ ಸತತ 5 ತಿಂಗಳಿನಿಂದ ಏಕಾಂಗಿಯಾಗಿ ಬಾವಿ ತೋಡಿದ ಎಂಟೆಕ್ ಪದವೀಧರರೊಬ್ಬರು ನೀರು ತಂದು ಆಧುನಿಕ ಭಗೀರಥ ಎನಿಸಿಕೊಂಡಿದ್ದಾರೆ.

ಜಿಲ್ಲೆಯ ಔರಾದ್ ತಾಲೂಕಿನ ಸೂರ್ಯಕಾಂತ್ ಪ್ರಭು ಎಂಟೆಕ್ ಓದಿದ್ದಾರೆ. 25/30 ವಿಸ್ತೀರ್ಣದ 14 ಅಡಿ ಬಾವಿಯನ್ನು ಬಬ್ಬರೇ ತೋಡಿ ನೀರು ತೆಗೆದಿದ್ದಾರೆ. ಎಂಟೆಕ್ ಮಾಡಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಸೂರ್ಯಕಾಂತ್ ಲಾಕ್‍ಡೌನ್ ವೇಳೆ ಕೃಷಿಯಲ್ಲಿ ಏನಾದರೂ ಸಾಧನೆ ಮಾಡಬೇಕು ಎಂಬ ಛಲದಿಂದ ಈ ಸಾಧನೆ ಮಾಡಿದ್ದಾರೆ. ಇದನ್ನೂ ಓದಿ: ಇಂದು ಕೇಂದ್ರ ಬಜೆಟ್ – ಆರ್ಥಿಕತೆಗೆ ಸಿಗುತ್ತಾ ‘ಬೂಸ್ಟರ್ ಡೋಸ್’..?

ಮೊದ ಮೊದಲು ಈ ಪದವೀಧರನ ಈ ಸಾಹಸ ನೋಡಿ ಗ್ರಾಮಸ್ಥರು ಹುಚ್ಚು ಎನ್ನುತ್ತಿದ್ದರು. ಈಗ ಅದೇ ಗ್ರಾಮಸ್ಥರು ಅವರ ಬಾವಿಯಿಂದ ನೀರು ತೆಗೆದುಕೊಂಡು ಹೋಗುತ್ತಿದ್ದಾರೆ. ಬಾವಿ ನೀರಿನಿಂದ 400 ಗಡಿಗಳನ್ನು ಬೆಳಸಿರುವ ಸೂರ್ಯಕಾಂತ್ ಛಲಕ್ಕೆ ಜಿಲ್ಲೆಯ ಜನರು ಜೈಕಾರ ಹಾಕುತ್ತಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಭ್ರಷ್ಟಾಚಾರದ ಬಗ್ಗೆ ಮಾತನಾಡಲು ಬಿಜೆಪಿಗೆ ನೈತಿಕತೆಯಿಲ್ಲ: ಲಕ್ಷ್ಮೀ ಹೆಬ್ಬಾಳ್ಕರ್

ತಮ್ಮ ಸಾಧನೆ ಕುರಿತು ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ ಸೂರ್ಯಕಾಂತ್‍ರವರು, ಮೊದಲು ಎಲ್ಲರು ಹುಚ್ಚ ಎಂದು ಕರೆಯುತ್ತಿದ್ದರು. ಈಗ ಅದೇ ಗ್ರಾಮಸ್ಥರು ಇಲ್ಲಿಂದಲೇ ನೀರು ತೆಗೆದುಕೊಂಡು ಹೋಗುತ್ತಿದ್ದು ನನಗೆ ಬಹಳ ಖುಷಿಯಾಗುತ್ತದೆ ಎಂದು ಸಂತಸ ವ್ಯಕ್ತಪಡಿಸಿದರು.

Share This Article
Leave a Comment

Leave a Reply

Your email address will not be published. Required fields are marked *